Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ರಘು ತಾಯಿ ನಿಧನ..!

---Advertisement---

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ4 ಆರೋಪಿಯಾಗಿರುವ ರಘು ತಾಯಿ ಇಂದು ನಿಧನರಾಗಿದ್ದಾರೆ. ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷನಾಗಿದ್ದ ರಘು, ರೇಣುಕಾಸ್ವಾಮಿಯನ್ನು ಹುಡುಕಿ ಕರೆ ತಂದಿದ್ದ. ಮಗ ಜೈಲು ಸೇರಿದ ಕೊರಗಿನಲ್ಲಿಯೇ ತಾಯಿ ಮಂಜುಳಾ ನಿಧನರಾಗಿದ್ದಾರೆ.

ಚಿತ್ರದುರ್ಗದ ಕೋಳಿ ಬುರುಜಹಟ್ಟಿ ನಿವಾಸದಲ್ಲಿ 65 ವರ್ಷದ ಮಂಜುಳ ನಿಧನರಾಗಿದ್ದಾರೆ. ರಘು ಮನೆಗೆ ಒಬ್ಬನೇ ವಾರಸುದಾರನಾಗಿದ್ದ. ಇದ್ದೊಬ್ಬ ಮಗ ಹೀಗೆ ಜೈಲು ಸೇರಿ ಕುಳಿತರೆ ಯಾವ ತಂದೆ ತಾಯಿಗೆ ಆದರೂ ಆತಂಕವಾಗುವುದಿಲ್ಲವೇ, ಚಿಂತೆಯಾಗುವುದಿಲ್ಲವೇ. ಈ ಕೇಸಲ್ಲಿ ಹೈಪ್ರೊಫೈಲ್ ಇರುವಂತ ದರ್ಶನ್ ಅವರೇ ಜಾಮೀನು ತೆಗೆದುಕೊಳ್ಳುವುದಕ್ಕೆ ಆಗಿಲ್ಲ. ಇನ್ನು ಮಗನನ್ನು ಕಾಪಾಡುವುದು ಯಾರು, ಬಿಡಿಸುವುದು ಯಾರು ಎಂಬ ಚಿಂತೆಯಲ್ಲಿಯೇ ಮಂಜುಳಾ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ತಾಯಿಯ ಅಂತ್ಯ ಸಂಸ್ಕಾರ ಮಾಡುವುದಕ್ಕೆ ರಘು ಕಳುಹಿಸಿಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗದ ಇನ್ನೊಬ್ಬ ಆರೋಪಿ ಅನಿಲ್ ಎಂಬಾತನ ತಂದೆಯೂ ಕೆಲ ದಿನಗಳ ಹಿಂದೆ ತೀರಿಕೊಂಡಿದ್ದರು. ಈಗ ಮಗನ ಕೊರಗಿನಲ್ಲೇ ರಘು ತಾಯಿ ಕೂಡ ತೀರಿಕೊಂಡಿದ್ದಾರೆ. ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಾ ಕೂತಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಕ್ರೂರವಾಗಿ ಕೊಂದಿರುವ ಆರೋಪದ ಮೇಲೆ ದರ್ಶನ್ ಸೇರಿದಂತೆ ಹದಿನೇಳು ಮಂದಿ ಜೈಲಿನಲ್ಲಿಯೇ ಇದ್ದಾರೆ. ಜುಲೈ 18ಕ್ಕೆ ನ್ಯಾಯಾಂಗ ಬಂಧನ ಮುಕ್ತಾಯವಾಗಿತ್ತು. ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 1ರ ತನಕ ಮ್ಯಾಯಾಂಗ ಬಂಧನ ವಿಸ್ತರಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...