Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರಿಗೆ ಜಾಮೀನು ಮಂಜೂರು..!

---Advertisement---

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹದಿನೇಳು ಮಂದಿ ಜೈಲು ಸೇರಿದ್ದರು. ಕೊಲೆ ಆರೋಪದಲ್ಲಿ ಪೊಲೀಸರ ಕೈಗೆ ತಗಲಾಕಿಕೊಂಡು ನೂರಕ್ಕೂ ಹೆಚ್ಚು ದಿನಗಳೇ ಕಳೆದಿವೆ. ಚಾರ್ಜ್ ಶೀಟ್ ಸಲ್ಲಿಕೆಯ ಬಳಿಕ ಒಬ್ಬೊಬ್ಬರೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಅದರಲ್ಲಿ ಮೊದಲ ಬಾರಿಗೆ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದೆ ಪವಿತ್ರಾ ಗೌಡ. ಆದರೆ ಕೋರ್ಟ್ ಅವರಿಗೆ ಜಾಮೀನು ನೀಡಲಿಲ್ಲ. ಚಾರ್ಜ್ ಶೀಟ್ ಸಲ್ಲಿಕೆಗೂ ಮುನ್ನವೇ ಜಾಮೀನಿಗೆ ಅರ್ಜಿ ಹಾಕಿದ್ದರು ಪವಿತ್ರಾ ಗೌಡ.

ಕಳೆದ ಶನಿವಾರವಷ್ಟೇ ನಟ ದರ್ಶನ್ ಕೂಡ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ಇಂದಿಗೆ ವಿಚಾರಣೆಯನ್ನು ಕೋರ್ಟ್ ಮುಂದೂಡಿಕೆ ಮಾಡಿತ್ತು. ಇದರ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಕೋರ್ಟ್ ಇಂದು ಜಾಮೀನು ನೀಡಿದೆ. ದರ್ಶನ್ ಅಂಡ್ ಗ್ಯಾಂಗ್ ಅಲ್ಲಿ ಮೂವರು ಬಿಡುಗಡೆಯಾಗಿದ್ದಾರೆ. ಸಿಸಿಹೆಚ್ 57ನೇ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. A15 ಕಾರ್ತಿಕ್, A16 ಕೇಶವ್ ಮೂರ್ತಿ, A17 ನಿಖಿಲ್ ಗೆ ಜಾಮೀನು ಸಿಕ್ಕಿದೆ.

ಈ ಮೂವರು ಕೊಲೆಯಲ್ಲಿ ಭಾಗಿಯಾದ ಉಲ್ಲೇಖ ಚಾರ್ಜ್ ಶೀಟ್ ನಲ್ಲಿ ಇಲ್ಲ. ರೇಣುಕಾಸ್ವಾಮಿ ಕೇಸಲ್ಲಿ ಕೇಶವ ಮೂರ್ತಿ, ಐದು ಲಕ್ಷ ಹಣ ಪಡೆದು ಮೃತದೇಹ ಸಾಗಿಸುವುದರಲ್ಲಿ ಭಾಗಿಯಾಗಿದ್ದ. ಹಾಗೇ ಪೊಲೀಸರ ಮುಂದೆ ಸರಂಡರ್ ಆಗಿದ್ದರು. ಕಾರ್ತಿಕ್, ಪಟ್ಟಣಗೆರೆ ಶೆಡ್ ನಲ್ಲಿ ಕೆಲಸ ಮಾಡುತ್ತಿದ್ದ. ಮೃತದೇಹ ಸಾಗಿಸಲು ಸಹಾಯ ಮಾಡಿದ್ದ ಹಾಗೂ ಪೊಲೀಸರ ಮುಮನದೆ ಸೆರಂಡರ್ ಆಗಿದ್ದ. ನಿಖಿಲ್ ಕೂಡ ಮೃತದೇಹ ಸಾಗಿಸಲು ಐದು ಲಕ್ಷ ಹಣ ಪಡೆದು, ಪೊಲೀಸರ ಮುಂದೆ ಸರಂಡರ್ ಆಗಿದ್ದ. ಹೀಗಾಗಿ ಈ ಮೂವರಿಗೆ ಜಾಮೀನು ಸಿಕ್ಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment