Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸ್ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಶಾಸಕ ತಿಪ್ಪಾರೆಡ್ಡಿಗೆ ಬೆದರಿಕೆ..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂ.13  : ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಖಂಡಿಸಿ ನಿನ್ನೆ (ಬುಧವಾರ) ಚಿತ್ರದುರ್ಗದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ ಅವರು ಕೂಡ ಭಾಗಿಯಾಗಿದ್ದರು. ಈ ಸಂಬಂಧ ತಿಪ್ಪಾರೆಡ್ಡಿ ಅವರು ಪ್ರತಿಭಟನೆ ಮಾಡಿದ್ದಕ್ಕೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗದಲ್ಲಿ ಬುಧವಾರ ನಟ ದರ್ಶನ್ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ ಭಾಗಿಯಾಗಿ ನಟ ದರ್ಶನ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬರು ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರಿಗೆ ಕರೆ ಮಾಡಿ ನೀವು ದರ್ಶನ್ ವಿರುದ್ಧ ಏಕೆ ಪ್ರತಿಭಟಿಸುತ್ತಿದ್ದೀರಿ ದರ್ಶನ್ ಕೊಲೆ ಮಾಡಿರುವುದಕ್ಕೆ ನಿಮಗೆ ಏನಾದರೂ ಸಾಕ್ಷಿಗಳು ಇದಾವೆ. ಹೇಗೆ ಎಂದು ಪ್ರಶ್ನಿಸಿದ್ದಾರೆಂತೆ. ಇದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ. ಕೆರೆ ಮಾಡಿದ ವ್ಯಕ್ತಿ ಯಾರು, ಯಾಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಅವರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರುವ ಆರೋಪಿಗಳಿಂದ ಸ್ಥಳ ಮಹಜರು ನಡೆಯಲಿದೆ. ನಾಲ್ವರು ಆರೋಪಿಗಳನ್ನ ಬೆಂಗಳೂರಿನಿಂದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಚಿತ್ರದುರ್ಗಕ್ಕೆ ಕರೆದುಕೊಂಡು ಬಂದು ಸ್ಪಾಟ್ ವೆರಿಫಿಕೇಷನ್ ಮಾಡಿಸಲಿದ್ದಾರೆ. ಎ3 ಆರೋಪಿಯ ಸಲಹೆ ಮೇರೆಗೆ ಕಿಡ್ನಾಪ್ ಮಾಡಿದ್ದ ರಾಘವೇಂದ್ರ, ಕಾರ್ತಿಕ್ , ನಂದಿಶ್, ಪವನ್‌ನಿಂದ ಕಾಮಾಕ್ಷಿ ಪಾಳ್ಯ ಪೊಲೀಸರು ಕಿಡ್ನಾಪ್ ಸ್ಥಳದಲ್ಲಿ ಮಹಜರು ಮಾಡಿಸಲಿದ್ದಾರೆ. ಈಗಾಗಲೇ ಕೊಲೆ ಮಾಡಿದ ಶೆಡ್ ನಲ್ಲಿ ಪರಿಶೀಲನೆ ನಡೆಸಲಾಗಿದೆ. ಅಲ್ಲಿಯೂ ಹಲವು ಸಾಕ್ಷ್ಯಗಳು ಸಿಕ್ಕಿವೆ. ಅಲ್ಲಿನ ಸಿಸಿಟಿವಿಯನ್ನು ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment