Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ :ನಟ ದರ್ಶನ್ ವಿರುದ್ಧ ಸಾಕ್ಷ್ಯ ಹೇಳದಂತೆ ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರ ಬಂಧನ!

---Advertisement---

ಬೆಂಗಳೂರು.ಜುಲೈ.02: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಆಘಾತಕಾರಿ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಸಾಕ್ಷಿಗೆ ನೇರವಾಗಿ ಜೀವ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಲ್ಲಿ ದರ್ಶನ್ ಅವರ ಸಾಮಾಜಿಕ ಜಾಲತಾಣದ ಅಭಿಮಾನಿ ಪುಟದ (ಡಿ ಕಂಪನಿ ಫ್ಯಾನ್ ಪೇಜ್) ಅಡ್ಮಿನ್ ಕೂಡ ಸೇರಿರುವುದು ಸಂಚಲನ ಮೂಡಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ 49ನೇ ಸಾಕ್ಷಿಯಾಗಿರುವ ಸಂದೀಪ್ ಎಂಬುವವರೇ ಈ ಬೆದರಿಕೆಗೆ ಒಳಗಾದವರು. ಇತ್ತೀಚೆಗೆ ಆರೋಪಿಗಳು ಸಂದೀಪ್ ಅವರನ್ನು ಮಾತನಾಡಿಸುವ ನೆಪದಲ್ಲಿ ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ನಗರದಾದ್ಯಂತ ಸುತ್ತಾಡಿಸಿದ್ದಾರೆ. ಈ ವೇಳೆ, ಯಾವುದೇ ಕಾರಣಕ್ಕೂ ಕೋರ್ಟ್‌ನಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳಬಾರದು, ಒಂದು ವೇಳೆ ಬಾಯಿ ಬಿಟ್ಟರೆ ಜೀವ ಉಳಿಯಲ್ಲ ಎಂದು ನೇರವಾಗಿಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಈ ಆಘಾತಕಾರಿ ಘಟನೆಯ ಬಗ್ಗೆ ಧೈರ್ಯವಾಗಿ ಸಾಕ್ಷಿದಾರ ಸಂದೀಪ್ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿದ್ದರು. ವಿಷಯದ ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಾಕ್ಷಿಗೆ ಸೂಕ್ತ ರಕ್ಷಣೆ ಒದಗಿಸಿದ್ದರು. ತದನಂತರ ವಿಶೇಷ ಕಾರ್ಯಾಚರಣೆ ನಡೆಸಿ ತುಮಕೂರು ಮೂಲದ ವೇಣು, ಸುಹಾಸ್ ಮತ್ತು ದರ್ಶನ್ ಫ್ಯಾನ್ ಪೇಜ್ ನಡೆಸುತ್ತಿದ್ದ ಪುನೀತ್ ಎಂಬ ಮೂವರನ್ನು ಜೈಲಿಗಟ್ಟಿದ್ದಾರೆ. ಬಂಧಿತರಲ್ಲಿ ಉಳಿದಿಬ್ಬರು ತುಮಕೂರಿನ ದರ್ಶನ್ ಅಭಿಮಾನಿಗಳ ಸಂಘದ ಸಕ್ರಿಯ ಸದಸ್ಯರೆಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಈ ಮೂವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ಸಂಚಿನ ಹಿಂದೆ ಬೇರೆ ಯಾರದ್ದಾದರೂ ಕೈವಾಡವಿದೆಯೇ ಎಂಬ ಕೋನದಲ್ಲೂ ತನಿಖೆ ಚುರುಕುಗೊಳಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಭಾರತದಲ್ಲಿ ಶೇ 72.8 ರಷ್ಟು ಪುರುಷರ ಆತ್ಮಹತ್ಯೆ: ಸದ್ದಿಲ್ಲದೆ ಆವರಿಸುತ್ತಿರುವ ಮಾನಸಿಕ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ತಜ್ಞರ ಆತಂಕ!

ಯುವ ಭಾರತೀಯರಲ್ಲಿ ಹೃದಯಾಘಾತಕ್ಕೆ ಲಸಿಕೆಯಲ್ಲ, ಧೂಮಪಾನ ಮತ್ತು ತೀವ್ರ ಕೋವಿಡ್‌ ಕಾರಣ: ICMR ಅಧ್ಯಯನ

ಬೆಂಗಳೂರು ಕಲ್ಲು ಕ್ವಾರಿ ದುರಂತದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ : ಕೇಂದ್ರ ಸಚಿವ ಹೆಚ್‌ ಡಿಕೆ ಒತ್ತಾಯ

ವಿಜ್ಞಾನ ಲೋಕದಲ್ಲಿ ಹೊಸ ಕ್ರಾಂತಿ; ಸ್ವತಃ ಆಹಾರ ಸೇವಿಸಿ, ಬೆಳೆದು, ಸಂತಾನೋತ್ಪತ್ತಿ ಮಾಡುವ ಕೃತಕ ಜೀವಕೋಶ ‘ಸ್ಪಡ್‌ಸೆಲ್’ ಸೃಷ್ಟಿ!

ಪೋಷಕರೇ ಗಮನಿಸಿ; ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್‌ ಡೇಟ್ ಕಡ್ಡಾಯ, ಸೆಪ್ಟೆಂಬರ್ 30ರವರೆಗೆ ಉಚಿತ ಅವಕಾಶ!

ರಾಜ್ಯದ ಸಾರಿಗೆ ಸಿಬ್ಬಂದಿಗೆ ಬಂಪರ್ ಗಿಫ್ಟ್; ನಾಲ್ಕೂ ನಿಗಮಗಳ ನೌಕರರ ಮೂಲ ವೇತನ ಶೇ. 12.5 ಹೆಚ್ಚಳ!