Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ‌ ಕೇಸ್ : ಇಂದಿನಿಂದ ಸಾಕ್ಷಿಗಳ ವಿಚಾರಣೆ ಆರಂಭ, ಚಿತ್ರದುರ್ಗದ ಅನುಕುಮಾರ್ ರಿಂದ ಮನವಿ

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಸದ್ಯ ಸಾಕ್ಷಿಗಳ ವಿಚಾರಣೆ ಇಂದಿನಿಂದ ಆರಂಭವಾಗಿದೆ. ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ಶುರುವಾಗಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳು ಕೂಡ ತಮ್ಮ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಇನ್ನುಳಿದ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದು, ನೇರವಾಗಿ ಕೋರ್ಟ್ ಗೆ ಬಂದಿದ್ದರು‌.

 

ಇನ್ನು ಚಿತ್ರದುರ್ಗದ ಅನುಕುಮಾರ್ ಕೋರ್ಟ್ ಬಳಿ ಮನವಿಯೊಂದನ್ನ ಮಾಡಿಕೊಂಡರು. ನಮ್ಮ ತಾಯಿ ಆರೋಗ್ಯ ಸರಿಯಿಲ್ಲ. ಹೀಗಾಗಿ ನನ್ನನ್ನು ಚಿತ್ರದುರ್ಗ ಜೈಲಿಗೆ ವರ್ಗಾವಣೆ ಮಾಡು ಎಂದು ಮನವಿ ಮಾಡಿಕೊಂಡರು. ನಿಮ್ಮ ಅರ್ಜಿ ಇನ್ನೂ ವಿಚಾರಣೆಯ ಹಂತದಲ್ಲಿದೆ ಎಂದು ಜಡ್ಜ್ ಕೂಡ ಹೇಳಿದರು. ಇದೇ ವೇಳೆ ಎಸ್ಪಿಪಿ ಸಚಿನ್ ಅವರು ಈ ಕೊಲೆ ಕೇಸ್ ನ ಸಾಕ್ಷಿಗಳಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಮನವಿ ಮಾಡಿಕೊಂಡರು. ಯಾವ ಸಾಕ್ಷಿಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆಸಲಾಗುತ್ತದೆ ಎಂಬುದನ್ನು ನಮಗೂ ತಿಳಿಸಿ, ಸಾಕ್ಷಿಗಳ ಪಟ್ಟಿಯನ್ನು ನೀಡುವಂತೆ ನಟ ದರ್ಶನ್ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಮೊದಲು ಕೊಲೆ ಕೇಸ್ ನ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಬೇಕು.

ಸಾಕ್ಷಿ ಸಂಖ್ಯೆ 7 ಮತ್ತು 8 ಕ್ಕೆ ಸಮನ್ಸ್ ನೀಡುವಂತೆ ಕೋರ್ಟ್ ಗೆ ಎಸ್‌ಪಿಪಿ ಸಚಿನ್ ಮನವಿ ಮಾಡಿಕೊಂಡರು. ಇಂದಿನಿಂದ ವಿಚಾರಣೆ ಆರಂಭವಾಗಿದ್ದು, ಆರೋಪ ಸಾಬೀತಾಗುವ ಮೇಲೆ ಶಿಕ್ಷೆಯನ್ನು ನಿಗದಿ ಮಾಡಲಾಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...