Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ : ಚಿತ್ರದುರ್ಗ ಅನಿಲ್ ಅರೆಸ್ಟ್..! ತಾಯಿಯ ಕಣ್ಣೀರು

---Advertisement---

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನೇ ದಿನೇ ಶಾಕಿಂಗ್ ಡೆವಲಪ್ಮೆಂಟ್ ಆಗುತ್ತಿವೆ. ಈ ಕೇಸಲ್ಲಿ ಅಭಿಮಾನಿಗಳು ಕೀಡ ತಗಲಾಕಿಕೊಳ್ಳುತ್ತಿದ್ದಾರೆ. ಈಗಾಗಲೇ ಹದಿನಾಲ್ಕು ಜನ ಈ ಕೇಸಲ್ಲಿ ಅರೆಸ್ಟ್ ಆಗಿದ್ರು, ಈಗ ಚಿತ್ರದುರ್ಗ ಮೂಲದ ಅನು ಕೂಡ ಅರೆಸ್ಟ್ ಆಗಿದ್ದಾನೆ.

ಅನು ಅಲಿಯಾಸ್ ಅನಿಲ್ ಕುಮಾರ್. ಈತ ಮೂಲತಃ ಚಿತ್ರದುರ್ಗದವನು. ಸಿಹಿ ನೀರು ಹೊಂಡದ ರಸ್ತೆಯಲ್ಲಿಯೇ ಈತನ ಮನೆಯಿದೆ. ಜಯಮ್ಮ ಹಾಗೂ ಚಂದ್ರಪ್ಪ ಎಂಬ ದಂಪತಿಯ ಮಗ. ಮೊದಲು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ. ಮೂರು ವರ್ಷದಿಂದ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ತಾನಾಯ್ತು ತನ್ನ ಸಂಸಾರವಾಯ್ತು ಎಂಬ ಜವಾಬ್ದಾರಿಯುತ ಹುಡುಗನಾಗಿದ್ದ. ಆದರೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷನಾಗಿರುವ ರಾಘವೇಂದ್ರ ಮಾತು ಕೇಳಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಮನೆಗೆ ಇದ್ದ ಮಗ ಜೈಲು ಸೇರಿರುವುದಕ್ಕೆ ಅನು ಮನೆಯವರು ಕಣ್ಣೀರು ಹಾಕುತ್ತಾ ಕುಳಿತಿದ್ದಾರೆ. ಅದನ್ನು ಬಿಟ್ಟರೆ ಬೇರೆ ದಾರಿ ಕಾಣಿಸುತ್ತಿಲ್ಲ. ನನ್ನ ಮಗನಿಗೆ ಏನು ಗೊತ್ತಿಲ್ಲ. ಬಡವರ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ನಟ ದರ್ಶನ್ ಭೇಟಿ ಮಾಡಿಸುವ ನೆಪವೊಡ್ಡಿ ಇಲ್ಲಿಂದ ಕರೆದುಕೊಂಡು ಹೋಗಿದ್ದರು. ಅನು ಮನೆಯ ಆಧಾರಸ್ತಂಭವಾಗಿದ್ದ ಎಂದು ತಾಯಿ ಜಯಮ್ಮ ಕಣ್ಣೀರು ಹಾಕಿದ್ದಾರೆ.

ಇನ್ನು ತಾಯಿ ಜಯಮ್ಮ ಕೂಡ ಮನೆಯ ಕೆಲಸ ಮಾಡುತ್ತಾ ಬದುಕಿಗೆ ಸಹಾಯವಾಗಿ ನಿಂತಿದ್ದರು. ಈಗ ಮನೆಯಲ್ಲಿ ನಾಲ್ಕೈದು ದಿನಗಳಿಂದ ಆತಂಕ ಶುರುವಾಗಿದೆ. ದೊಡ್ಡವರೆಲ್ಲಾ ಹೇಗೋ ಬಚಾವ್ ಆಗಿ ಬಿಡುತ್ತಾರೆ. ಆಟೋ ಚಾಲನೆ ಮಾಡಿ ಅಂದಿನ ಜೀವನಕ್ಕೆ ಹಣ ಒದಗಿಸಿಕೊಳ್ಳುತ್ತಿದ್ದ ಅನಿಲ್ ಏನು ಮಾಡುವುದಕ್ಕೆ ಸಾಧ್ಯ ಎಂಬ ಭಯ ಅವರ ಪೋಷಕರದ್ದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...