ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಹಾಗೂ ಪವಿತ್ರ ಗೌಡ ಸೇರಿದಂತೆ ಹದಿನೇಳು ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ. ಈಗಾಗಲೇ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ ಗೆ ಬಂದಿದ್ದಾರೆ.
64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಈ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ಪ್ರಕರಣದ ಕುರಿತು ಮಾಹಿತಿ ಹಾಗೂ ವಿವರಣೆಯನ್ನು ಪಡೆಯೋದಕ್ಕೆ ಕೋರ್ಟ್ ವಿಚಾರಣೆಯನ್ನು ನಡೆಸುತ್ತಾ ಇದೆ. ಹೀಗಾಗಿ ಹದಿನೇಳು ಮಂದಿ ಆರೋಪಿಗಳು ಹಾಜರಾಗುವ ಸಾಧ್ಯತೆ ಇದೆ. ವಾದ ಪ್ರತಿ ವಾದವನ್ನು ಕೋರ್ಟ್ ಆಲಿಸಲಾಗುತ್ತದೆ. ಇವತ್ತು ಟ್ರೈಯಲ್ ದಿನಾಂಕವನ್ನು ನಿಗದಿ ಪಡಿಸುವ ಸಾಧ್ಯತೆ ಇದೆ.
ಇನ್ನು ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾ ಮಾಡಬೇಕೆಂದು ರಾಜ್ಯ ಪೊಲೀಸ್ ಇಲಾಖೆ ಅದಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲ್ಲಿಯೂ ವಾದ ಪ್ರತಿವಾದ ನಡೆದಿದ್ದು, ಮುಂದಿನ ವಿಚಾರಣೆಯಲ್ಲಿ ಏನಾಗಬಹುದು ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ಕಳೆದ ಬಾರಿ ವಿಚಾರಣೆ ನಡೆದಾಗ ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ಕ್ಲಾಸ್ ತೆಗೆದುಕೊಂಡಿತ್ತು. ಬಳಿಕ ಪವಿತ್ರಾ ಗೌಡ ಪರ ವಕೀಲರು, ಪವಿತ್ರಾ ಗೌಡ ಸಿಂಗಲ್ ಪೇರೆಂಟ್ ಮಗಳನ್ನು ನೋಡಿಕೊಳ್ಳುವುದಕ್ಕೆ ಯಾರು ಇಲ್ಲ. ಬೇಲ್ ಕ್ಯಾನ್ಸಲ್ ಮಾಡಬೇಡಿ ಎಂದಿದ್ದರು.
ಸದ್ಯ ಇಂದು ಬೆಂಗಳೂರಿನ ಸಿಸಿಹೆಚ್ ಕೋರ್ಟ್ ಗೆ ಆಗಮಿಸಿದ್ದು, ಚಾರ್ಜ್ ಫ್ರೇಮ್ಲ ಮಾಡಲಾಗುತ್ತದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಕ್ಕೆ ದಿನಾಂಕವನ್ನು ನಿಗದಿ ಪಡಿಸಲಾಗುತ್ತದೆ. ಹೀಗಾಗಿ ಹದಿನೇಳು ಆರೋಪಿಗಳು ಹಾಜರಾಗಲಿದ್ದಾರೆ.















