Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಣ್ಣು ಅಂದ್ರೆ ಕ್ಷಮಯಾಧರಿತ್ರಿ ಅಂತಾರೆ ಆದ್ರೆ.. ಪವಿತ್ರಾ ಗೌಡ ವಿರುದ್ಧ ರೇಣುಕಾಸ್ವಾಮಿ ಚಿಕ್ಕಪ್ಪ ಕಿಡಿ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 05 : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದ ದರ್ಶನ್ ಅಂಡ್ ಗ್ಯಾಂಗ್ ಪಟ್ಟಣಗೆರೆ ಶೆಡ್ ನಲ್ಲಿ ಹಿಂಸಿಸಿದ್ದು ಮಾತ್ರ ಭಯನಾಕವಾಗಿತ್ತು. ಮೂಳೆ‌ ಮುರಿದರು, ಅಂಗಾಂಗ ಡ್ಯಾಮೇಜ್ ಮಾಡಿದರು, ರಕ್ತದ ಮಡುವಿನಲ್ಲಿ ಬಿದ್ದಿದ್ದರು ಬಿಡದೆ ಕೊಂದರು ಎಂಬುದನ್ನು ಇಷ್ಟು ದಿನ ಮಾತಲ್ಲಿ ಕೇಳುತ್ತಿದ್ದೆವು. ಆದರೆ ಅದರ ಫೋಟೋಗಳು ಈಗ ರಿವೀಲ್ ಆಗುತ್ತಿವೆ. ಮಗನ ಕೊನೆಯ ಕ್ಷಣದ ಹಿಂಸೆಯ ಫೋಟೋಗಳನ್ನು ಕಂಡು ರೇಣುಕಾಸ್ವಾಮಿ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಇದೀಗ ಅವರ ಚಿಕ್ಕಪ್ಪ ಷಡಕ್ಷರಯ್ಯ ಮಾತನಾಡಿದ್ದು, ಪವಿತ್ರಾ ಗೌಡ ವಿರುದ್ಧ ಕೆಂಡಕಾರಿದ್ದಾರೆ.

ದರ್ಶನ್ ಅಂಡ್ ಗ್ಯಾಂಗ್ ಮಾಡಿದ ಕೃತ್ಯ ಭಯಾನಕವಾದುದು, ಅದನ್ನು ನೋಡಲೂ ಆಗಲಿಲ್ಲ, ಅದನ್ನು ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತೆ ಮೃತ ರೇಣುಕಾ ಸ್ವಾಮಿ ಚಿಕ್ಕಪ್ಪ ಷಡಕ್ಷರಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಗ್ಯಾಂಗ್ ತಂಡದವರು ಭಯಾನಕವಾದ ಕ್ರೌರ್ಯ ಮೆರೆದಿದ್ದಾರೆ. ಬೇಡಿಕೊಂಡ್ರೂ, ಕೇಳಿಕೊಂಡ್ರೂ ಬಿಟ್ಟಿಲ್ಲ, ಅಸ್ಲೀಲ ಮೆಸೇಜ್ ಕಳಿಸಿದ್ದು ತಪ್ಪು, ಆದ್ರೆ ಅದಕ್ಕೆ ಇಂಥ ಶಿಕ್ಷೆಯಾ ಎಂದು ಪ್ರಶ್ನಿಸಿದರು. ಹೀಗೆ ಮೆಸೇಜ್ ಕಳಿಸಿದ್ರೆ ಕೊಲೆ ಅನ್ನೋದಾದ್ರೆ ಪ್ರತಿ ದಿನ ಎಷ್ಟು ಕೊಲೆ ಆಗಬೇಕು.

ಪವಿತ್ರಾ ಗೌಡ ತನ್ನ ಚಪ್ಪಲಿಯಲ್ಲಿ ಹೊಡೆದಿದ್ದಾಳೆ. ಹೆಣ್ಣು ಅಂದ್ರೆ ಕ್ಷಮಯಾಧರಿತ್ರಿ ಅಂತಾರೆ ಆದ್ರೆ ಇಷ್ಟು ಕ್ರೌರ್ಯ ಯಾಕೆ ಅಂತಾ ಗೊತ್ತಾಗಲಿಲ್ಲ, ಹೆಣ್ಣು ಎಂಬ ಪಧ ಅರ್ಥವೇ ಪವಿತ್ರಾಗೌಡ ಗೆ ಗೊತ್ತಿಲ್ಲ, ರೇಣುಕಾಸ್ವಾಮಿ ತಪ್ಪು ಮಾಡಿದ್ರೆ ನಮಗೆ ಹೇಳಬೇಕಿತ್ತು. ನಾವು ಬುದ್ಧಿ ಹೇಳಿ ಸರಿ ಮಾಡ್ತಿದ್ವಿ, ಆದ್ರೆ ಇಂಥ ಶಿಕ್ಷೆ ನೋಡಿದ್ದು ಮಾತ್ರ ಕ್ರೌರ್ಯ, ಅಶ್ಲೀಲ ಮೆಸೇಜ್ ಕಳಿಸಿದ್ದನ್ನು ನಾನು ಸಮರ್ಥಿಸಿಕೊಳ್ಳಲ್ಲ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರೇಣುಕಾಸ್ವಾಮಿ ಚಿಕ್ಕಪ್ಪ ಷಡಕ್ಷರಯ್ಯ ಆಗ್ರಹಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!