Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಲ್ಲ.. ಷಡ್ಯಂತ್ರದ ವಾಸನೆ ಬಡಿಯುತ್ತಿದೆ : ದರ್ಶನ್ ಪರ ವಕೀಲರ ವಾದವೇನು..?

---Advertisement---

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. ದರ್ಶನ್ ಜಾಮೀನಿಗೆ ಎಸ್ಪಿಪಿ ಪ್ರಸನ್ನ ಕುಮಾರ್ ಹಾಗೂ ಪೊಲೀಸರು ತಕರಾರು ತೆಗೆದಿದ್ದಾರೆ. ಈ ಸಂಬಂಧ ಇಂದು ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ. ರೇಣುಕಾಸ್ವಾಮಿ ಅಪಹರಣವೇ ಆಗಿಲ್ಲ, ದರ್ಶನ್ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ವಾದ ಮಂಡಿಸಿದ್ದಾರೆ.

ದರ್ಶನ್ ಅವರು ಜೈಲು ಸೇರಿದ ಮೇಲೆ ಬೆನ್ನು ನೋವಿನಿಂದ ಬಳಲುತ್ತಿದ್ದರು. ಇದರ ಆಧಾರದ ಮೇಲೆ ಜಾಮೀನು ಕೂಡ ಪಡೆದರು. ಈಗ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಇಂದು ವಾದ ಮಂಡಿಸಿರುವ ಸಿ.ವಿ.ನಾಗೇಶ್, ದರ್ಶನ್ ಕೇಸಲ್ಲಿ ಷಡ್ಯಂತ್ರದ ವಾಸನೆ ಬಡಿಯುತ್ತಿದೆ. ಶವವನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇಟ್ಟಿದ್ದರಿಂದ ಸಾವಿನ ನಿಖರ ಸಮಯ ತಿಳಿದಿಲ್ಲ. ಶವ ಪರೀಕ್ಷೆಯ ವರದಿ ಒಂದು ತಿಂಗಳ ಬಳಿಕ ಬಂದಿದೆ. ರೇಣುಕಾಸ್ವಾಮಿಯನ್ನು ಯಾರೂ ಕೂಡ ಮೋಸದಿಂದಾಗಲೀ ಬಲವಂತದಿಂದಾಗಲೀ ಕರೆತಂದಿಲ್ಲ. ಮೃತನ ತಂದೆ‌ ಕಾಶೀನಾಥಯ್ಯ ಅವರು ತಮ್ಮ ಹೇಳಿಕೆಯಲ್ಲಿ ಜೂನ್ 8ರಂದು ಎಂದಿನಂತೆ ರೇಣುಕಾಸ್ವಾಮಿ ಕೆಲಸಕ್ಕೆ ಹೋದ ಬಗ್ಗೆ ಉಲ್ಲೇಖವಿದೆ.

ಹಳೆಯ ಸ್ನೇಹಿತರೊಟ್ಟಿಗೆ ಹೋಗುತ್ತೇನೆಂದು ಅವರ ತಾಯಿ ಹೇಳಿರುವಂತೆ ಹೇಳಿಜೆ ನಮೂದಿಸಲಾಗಿದೆ. ಅಂದು ರೇಣುಕಾಸ್ವಾಮಿ ದಿನನಿತ್ಯ ಧರಿಸುವ ಯೂನಿಫಾರ್ಮ್ ಧರಿಸಿರಲಿಲ್ಲ. ಮಧ್ಯಾಹ್ನದ ಊಟಕ್ಕೆ ಬರಲ್ಲವೆಂದು ಕೂಡ ಹೇಳಿದ್ದರೆಂದು ಹೇಳಿಕೆ ದಾಖಲಿಸಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವ ದಾರಿಯಲ್ಲಿ ದುರ್ಗಾ ಬಾರ್ ನಲ್ಲಿ ಫೋನ್ ಪೇ ಮಾಡಲಾಗಿದೆ. ಒಂದು ವೇಳೆ ಕಿಡ್ನ್ಯಾಪ್ ಮಾಡಿದ್ದರೆ ಬಾರ್ ಗೆ ಬಂದು ಫೋನ್ ಪೇ ಮಾಡಲು ಸಾಧ್ಯವಾಗುತ್ತಿತ್ತಾ..?ಆದರೆ ಕೊಲೆಯ ಉದ್ದೇಶದಿಂದ ಕಿಡ್ನ್ಯಾಪ್ ಆಗಿಲ್ಲ. ಶವವನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು ಸಾಕ್ಷ್ಯ ನಾಶವಲ್ಲ ಎಂದು ವಾದ ಮಂಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...