ಡಿ ಗ್ಯಾಂಗ್ ನಿಂದ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ : ಸಂಭ್ರಮಿಸಿದ ಕುಟುಂಬ

1 Min Read

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ಡಿಬಾಸ್ ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಬುಧವಾರ ಮುಂಜಾನೆ ಹೊಸ ಸದಸ್ಯನ ಆಗಮನವಾಗಿದೆ.
ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.

ನಗರದ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ. ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ.

ರೇಣುಕಾ ಸ್ವಾಮಿ ಕೊಲೆ ಬಳಿಕ ಜೂನ್ 11 ರಂದು ದರ್ಶನ್ ಬಂಧನವಾಗಿತ್ತು. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ಸುಮಾರು ನಾಲ್ಕು ತಿಂಗಳ ಬಳಿಗ ಮನೆಯಲ್ಲಿ ಸಂತಸ ಮಾನೆ ಮಾಡಿದ್ದು, ಕುಟುಂಬದ ಸದಸ್ಯರು ಒಂದೆಡೆ ರೇಣುಕಾ ಸ್ವಾಮಿಯನ್ನು ನೆನೆದು ಕಣ್ಣೀರಾದರೆ, ಮತ್ತೊಂದೆಡೆ ಸಹನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ ಈ ಸಂದರ್ಭದಲ್ಲಿ ಇಡೀ ಕುಟುಂಬ ಸಂತಸದಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *