Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡಿ : ಕರವೇ ಕಾರ್ಯಕರ್ತರ ಒತ್ತಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆಗಳನ್ನು ದುರಸ್ಥಿ ಮಾಡದಿರುವ ಲೋಕೋಪಯೋಗಿ ಇಲಾಖೆ ನಿರ್ಲಕ್ಷೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ

ಪ್ರವೀಣ್‍ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ಆಗಿಂದಾಗ್ಗೆ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿರುತ್ತವೆ. ರೈಲ್ವೆ ಅಂಡರ್ ಬ್ರಿಡ್ಜ್‍ನಲ್ಲಿ ರಸ್ತೆ ಸಿಂಕ್ ಆಗಿದೆ. ಸರ್ವಿಸ್ ರಸ್ತೆಗಳಲ್ಲಿ ಗಿಡ-ಮರಗಳಿಲ್ಲ. ಅಪಘಾತದಿಂದ ಮೃತಪಟ್ಟ ಪ್ರಾಣಿಗಳ ದೇಹಗಳನ್ನು ತೆಗೆಯುವುದಿಲ್ಲ. ಯಾವುದೇ ನಿರ್ಬಂಧವಿಲ್ಲದೆ ವಾಹನಗಳಿಂದ ಟೋಲ್ ಮಾತ್ರ ಸಂಗ್ರಹಿಸಲಾಗುತ್ತಿದೆಯೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದುರ್ಗ ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ-ನಾಲ್ಕರ ಎರಡು ಬದಿಯಲ್ಲಿ ವಿದ್ಯುತ್ ದೀಪಗಳಿಲ್ಲ. ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ಶಾಲಾ-ಕಾಲೇಜುಗಳಿದ್ದು, ದಿನನಿತ್ಯವೂ ಮಕ್ಕಳು ಜೀವ ಭಯದಿಂದ ಓಡಾಡುವಂತಾಗಿದೆ.
ಪ್ರಶ್ನಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದಾರೆ. ಕನ್ನಡ ಭಾಷೆ ಬಾರದ ಈ ಅಧಿಕಾರಿಗಳು ಹಿಂದಿ ತೆಲುಗಿನಲ್ಲಿ ಮಾತನಾಡುತ್ತಾರೆ. ಕನ್ನಡಿಗರನ್ನು ನೇಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ.ಮಹಂತೇಶ್ ಆಗ್ರಹಿಸಿದರು.

ಓಬಳೇಶ್‍ಯಾದವ್, ಕೃಷ್ಣಮೂರ್ತಿ, ಸತೀಶ್, ಮೋಹನ್‍ಬಾಬು, ರವಿಕುಮಾರ್, ಮಾರುತಿ, ಅನಿಲ್‍ಕುಮಾರ್, ಧನಂಜಯ, ಸೋಮಣ್ಣ, ಶ್ರೀನಿವಾಸ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...