ಜನಪ್ರತಿನಿಧಿಗಳು ಮಾರ್ಕೆಟ್ ನಲ್ಲಿ ಸಿಗುವ ಫಿಶ್ ಅಲ್ಲ : ಸಚಿವ ಎಸ್ ಟಿ ಸೋಮಶೇಖರ್

1 Min Read

ಮೈಸೂರು : ವಿಧಾನ ಪರಿಷತ್ ಚುನಾವಣೆ ಗರಿಗೆದರಿದೆ. ಪಕ್ಷದ ಮುಖಂಡರು, ಸಚಿವರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಶುರು ಮಾಡಲು ಆರಂಭಿಸಿದ್ದಾರೆ. ‌ಮೈಸೂರು ಮತ್ತು ಚಾಮರಾಜನಗರ ವಿಧಾನ ಪರಿಷತ್ ಗೆ ಬಿಜೆಪಿ ಅಭ್ಯರ್ಥಿಯಾಗಿ ರಘು ಕೌಟಿಲ್ಯ ನಾಮಪತ್ರ ಸಲ್ಲಿಕೆ‌ ಮಾಡಿದ್ದಾರೆ.

ಈ ವೇಳೆ ಸಚಿವ ಎಸ್ ಟಿ ಸೋಮಶೇಖರ್ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸಚಿವ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಪಕ್ಷ ಜನ ಪ್ರತಿನಿಧಿಗಳಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ. ಜನಪ್ರತಿನಿಧಿಗಳು ಖರೀದಿ ವಸ್ತುವು ಅಲ್ಲ. ಮಾರ್ಕೆಟ್ ನಲ್ಲಿ ಸಿಗುವ ಫಿಶ್ ಅಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ಸ್ಥಳೀಯ ಜನಪ್ರತಿನಿಧಿಗಳನ್ನು ಖರೀದಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರೂ ಖರೀದಿ ವಸ್ತುವಲ್ಲ. ಯಾವುದೇ ಖರೀದಿ ಇಲ್ಲ. ಕಾಂಗ್ರೆಸ್ಸಿವರಿಗೆ ಹೇಳಲು ಬೇರೇನೂ ಇಲ್ಲ. ಅವರು ಗಾಜಿನ ಮನೆಯಲ್ಲಿ ಕೂತು ಮತ್ತೊಬ್ಬರ ಮನೆಗೆ ಕಲ್ಲು ಎಸೆಯುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *