ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಜ.25): ಭಾರತದ 74ನೇ ಗಣರಾಜ್ಯೋತ್ಸದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ 14 ಜನರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುತ್ತಿದೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಗುರುವಾರ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ತರುವಾಯ ಸಾಧಕರನ್ನು ಸನ್ಮಾನಿಸಲಿದ್ದಾರೆ.
ಕ್ರೀಡಾಪುಟುಗಳಾದ ಪ್ರಜಾ.ಸಿ.ಎಸ್, ಸದ್ದಾಂ ಹುಸೇನ್, ವೈಶಾಲಿ, ಗುರುರಾಜ್.ಪಿ., ಛಾಯಾಶ್ರೀ.ಎನ್.ಎಂ., ಲಿಖಿತ್.ಎಂ.ಸಿ, ಪ್ಯಾರಾ ಅಥ್ಲೆಟಿಕ್ಸ್ ರಾಧ.ವಿ, ಕೃಷಿ ಹಾಗೂ ತೋಟಗಾರಿಕೆಯಲ್ಲಿ ಸಾಧನೆ ಮಾಡಿದ ಡಾ.ಹೆಚ್.ಏಕಾಂತಯ್ಯ, ಡಾ.ಎಸ್.ಸಿ.ವೀರಭದ್ರಪ್ಪ, ಸೇವಾದಳ ಬೆಳೆವಣಿಯಲ್ಲಿ ಪ್ರಮುಖ ಪಾತ್ರವಹಿಸಿದ ದೈಹಿಕ ಶಿಕ್ಷಕರಾದ ಟಿ.ಲೋಕೇಶ್ವರ, ಮೆಹಬೂಬಿ, ಗ್ರಾಮ ಒನ್ ಯೋಜಯಡಿ ಸರ್ಕಾರದ ಯೋಜನೆಗಳನ್ನು ನಾಗರಿಕರಿಗೆ ತಲುಪಿಸಲು ಶ್ರಮಿಸಿದ ಇಸ್ಮಾಯಿಲ್, ಶಿವರಾಜ್, ಹುಸೇನ್ ಅವರನ್ನು ಉಪವಿಭಾಗಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿ ಸನ್ಮಾನಕ್ಕೆ ಆಯ್ಕೆ ಮಾಡಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






