ಜೋಗಿಮಟ್ಟಿ ವನ್ಯಜೀವಿ ಅಭಯಾರಣ್ಯವಾಗಿದ್ದು ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿ ಸಂಪತ್ತಿನ ತಾಣವಾಗಿದೆ. ಇಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ, ಪ್ರವಾಸಿಗರಿಗೆ ಸುರಕ್ಷಿತವಾಗಿ ಹಾಗೂ ಸಮಗ್ರವಾಗಿ ವನ್ಯಜೀವಿ ವೀಕ್ಷಣೆ ಮಾಡಲು ಸೂಕ್ತ ಸೌಲಭ್ಯಗಳ ಕೊರತೆ ಇದೆ ಆದ್ದರಿಂದ, ಜೋಗಿ ಮಟ್ಟಿ ವನ್ಯಧಾಮದಲ್ಲಿ ಅತ್ಯಾಧುನಿಕ ವಾಚ್ ಟವರ್ ಅಗತ್ಯವಾಗಿ ನಿರ್ಮಾಣ ಮಾಡಬೇಕಿದೆ, ವಾಚ್ ಟವರ್ ನಿರ್ಮಾಣ ಮಾಡುವುದರಿಂದ ಪ್ರವಾಸಿಗರಿಗೆ ಸುಲಭ ಹಾಗೂ ಸುರಕ್ಷಿತ ವನ್ಯಜೀವಿ ವೀಕ್ಷಣೆ ಅನುಕೂಲವಾಗುತ್ತದೆ ಹಾಗೂ ಪ್ರಕೃತಿ ಸೌಂದರ್ಯವನ್ನು ಎತ್ತರದಿಂದ ಆನಂದಿಸುವ ಅವಕಾಶ ಕೊಟ್ಟಂತಾಗುತ್ತದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಿದಂತಾಗುತ್ತದೆ ಇದರಿಂದಾಗಿ ಪ್ರವಾಸಿಗರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರು ಪತ್ರದ ಮುಖಾಂತರ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪಪ್ಪಿ ಸ್ ಪಪ್ಪಿ’ಸ್ ಸ್ಟೂಡೆಂಟ್ ವಿಂಗ್ ಅಧ್ಯಕ್ಷ ರವಿ, ಉಪಾಧ್ಯಕ್ಷ ಸಂದೀಪ್ ,ಕಾರ್ಯದರ್ಶಿ ಸಲೀಂ ಹಾಗೂ ಸದಸ್ಯರಾದ ದರ್ಶನ್ ಮತ್ತು ನಿಜಾಂ ಇದ್ದರು.















