Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ : ಏನಿದು ಹೊಸ ವಿವಾದ..?

---Advertisement---

ಬೆಂಗಳೂರು: ಗುತ್ತಿಗೆ ವಿಚಾರದಲ್ಲಿ ಮುಸ್ಲಿಮರ ಒಲೈಕೆ ಮಾಡಿದ್ದಂತ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೆ ಮುಸ್ಲಿಮರ ಒಲೈಕೆ ಮಾಡಲು ರೆಡಿಯಾಗಿದ್ದಾರೆ. ವಸತಿ ಯೋಜನೆಯಲ್ಲೂ ಮೀಸಲಾತಿಯನ್ನ ಹೆಚ್ಚಳ ಮಾಡುವುದಕ್ಕೆ ಹೊರಟಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿದ್ದರಾಮಯ್ಯ ಸರ್ಕಾರ ಕೈಗೊಂಡ ಈ ನಿರ್ಣಯಕ್ಕೆ ವಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಇವತ್ತು ಸಚಿವ ಸಂಪುಟ ಸಭೆ ನಡೆಸಿತ್ತು. ಈ ಸಭೆಯಲ್ಲಿ ಶೇಕಡ 10ರಷ್ಡಿರುವ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ.

ಮುಸ್ಲಿಂ, ಜೈನ, ಕ್ರೈಸ್ತ ಸೇರಿ ಎಲ್ಲಾ ಅಲ್ಪಸಂಖ್ಯಾತರಿಗೂ ಇದು ಅನ್ವಯ ಆಗಲಿದೆ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡುವುದು ಸರ್ಕಾರದ ಉದ್ದೇಶವಾಗಿದೆ.‌ ಸಾಚಾರ್ ಕಮಿಟಿ ವರದಿಯಮ್ನೂ ಕೇಂದ್ರ ಪರಿಗಣಿಸುತ್ತದೆ. ಕೇಂದ್ರ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದು, ಬಳಿಕ ಮಾತನಾಡಿದ ಸಚಿವ ಕೆ ಹೆಚ್ ಪಾಟೀಲ್ ಅವರು, ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲಾ ಅಲ್ಪಸಂಖ್ಯಾತರಿಗೂ ಅನ್ವಯ ಆಗಲಿದೆ. ಸಾಚಾರ್ ಕಮಿಟಿ ವರದಿಯಮ್ನೂ ಕೇಂದ್ರ ಪರಿಗಣಿಸುತ್ತದೆ. ಕೇಂದ್ರ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ಮುಸ್ಲಿಂ, ಜೈನರು, ಕ್ರಿಶ್ಚಿಯಯ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳು ಇವೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವೂ ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment