Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಂಚಮಸಾಲಿ ಹೋರಾಟಕ್ಕೆ ಮೀಸಲಾತಿ ವಿಚಾರ : ರಾ. ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ

---Advertisement---

ಗದಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ ಸರ್ಕಾರ ಹೊಸದಾಗಿ ಬಂದಾಗೆಲ್ಲಾ ಜೋರಾಗುತ್ತದೆ. ಇದೀಗ ಮತ್ತೆ ಹೋರಾಟ ಜೋರಾಗುವ ಸಾಧ್ಯತೆ ಇದೆ. ಮೀಸಲಾತಿಗಾಹಿ ಇಂದು ಗದಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮಾಡಿ ಒತ್ತಾಯಿಸಿದ್ದಾರೆ. ಮೀಸಲಾತಿ ಹೋರಾಟಗಾರರು ಬಸವ ಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ಪೂಜೆ ಮಾಡಿದ್ದಾರೆ.

 

ಪಂಚಮಸಾಲಿಯವರ ನೋವು ಏನು ಎಂಬುದು ಸಚಿವ ಎಚ್ ಕೆ ಪಾಟೀಲ್ ಅವರಿಗೆ ಗೊತ್ತು. ಎಚ್ ಕೆ ಪಾಟೀಲ್ ಅವರಿಂದ ನಮಗೆ ಒಳ್ಳೆಯದ್ದೇ ಆಗುತ್ತೆ ಎಂಬ ಭರವಸೆ ಇದೆ. ಪಂಚಮಸಾಲಿ ಹೋರಾಟದಲ್ಲಿ ಬಂದು ಭಾಗಿಯಾಗಿದ್ದಾರೆ. ಸಿಎಂ ಜೊತೆಗೆ ಮಾತನಾಡುತ್ತೇನೆ ಎಂದಿದ್ದಾರೆ.

 

ಆದರೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸುತ್ತೀವಿ ಅಂತ ಹೇಳಿ ಸುಮ್ಮನೆ ಆಗಿದ್ದಾರೆ. ಈಗ ಕಾನೂನು ಸಚಿವರೇ ಬಂದು ಮಾತನಾಡಿದ್ದಾರೆ. ಸಮಸ್ಯೆ ಬಗೆಹರಿಸಬಹುದು ಎಂದುಕೊಂಡಿದ್ದೇನೆ. ಸಿಎಂ ಅವರಿಂದ ಪೂರಕವಾದ ಪ್ರತಿಕ್ರಿಯೆ ಬಂದರೆ ಶಾಂತಿಯುತ ಹೋರಾಟ ಮಾಡುತ್ತೇವೆ. ಪೂರಕವಾಗಿ ಬೆಳವಣಿಗೆಯಾಗದೆ ಹೋದರೆ ಇನ್ನುಳಿದ 26 ಜಿಲ್ಲೆಯಲ್ಲಿ ಹೋರಾಟ ಮಾಡುತ್ತೇವೆ. ನವೆಂಬರ್ ಒಳಗೆ ಒಂದು ಸುತ್ತಿನ ಮಾತುಕತೆ ನಡೆಯಬೇಕು. ಈ ಹಿಂದೆ ಬಿಜೆಪಿಯವರು ಕೂಡ ನಿರ್ಲಕ್ಷ್ಯ ಮಾಡಿದ್ದರು. ಪಂಚಮಸಾಲಿಯವರು ನಮ್ಮನ್ನು ಬಿಟ್ಟು ಇನ್ನೆಲ್ಲಿಗೆ ಹೋಗುತ್ತಾರೆ ಎಂದುಕೊಂಡಿದ್ದರು ಬಿಜೆಪಿಯವರು. ಆದರೆ ಈಗ 11 ಜನ ಗೆದ್ದಿದ್ದಾರೆ. ಇಬ್ಬರು ಮಂತ್ರಿಗಳಾಗಿದ್ದಾರೆ. ಈಗ ನಿರ್ಲಕ್ಷ್ಯ ಮಾಡಬಾರದು. ಕೂಡಲೇ ಮಾತುಕತೆ ನಡೆಸಬೇಕು, ಸಮಸ್ಯೆ ಸರಿಪಡಿಸಬೇಕು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...