2 ತಿಂಗಳಲ್ಲಿ ಮೀಸಲಾತಿ : ಪಂಚಮಸಾಲಿ ಸಮುದಾಯದಿಂದ ಪ್ರತಿಭಟನೆ ವಾಪಾಸ್ ಪಡೆಯುತ್ತಾರಾ..?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೊತೆ ಸಚಿವ ಸಿಸಿ ಪಾಟೀಲ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಮಾತುಕತೆ ನಡೆಸಿದ್ದು, ಸಂಧಾನ ಯಶಸ್ವಿಯಾಗಿದೆ. ಎರಡು ತಿಂಗಳಿನಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಸಿಎಂ ಮಾತಿಗೆ ಒಪ್ಪಿಗೆ ಸೂಚಿಸಿ ಪಂಚಮ‌ಸಾಲಿ ಜಯಮೃತ್ಯುಂಜಯ ಶ್ರೀ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ನಡೆಸುವುದನ್ನು ಹಿಂಪಡೆದಿದ್ದಾರೆ. ಈ ಸಂಬಂಧ ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ೨ ತಿಂಗಳಲ್ಲಿ ಮೀಸಲಾತಿ ಪರಿಶೀಲನೆ ಮತ್ತು ಸರ್ವೇ ಕಾರ್ಯ ಮುಗಿಸಿ,ಒಬಿಸಿ ಆಯೋಗದಿಂದ ವರದಿ ಪಡೆದು ಮೀಸಲಾತಿ ಘೋಷಣೆ ಮಾಡುತ್ತಾರಂತೆ.

ಸಭೆಯಲ್ಲಿ ಮಾತನಾಡಿದ ಸಚಿವ ಸಿ.ಸಿ ಪಾಟೀಲ್, ಮೀಸಲಾತಿಗಾಗಿ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಾರೆ. ಬೆಂಗಳೂರಲ್ಲಿ ಬೃಹತ್ ಸಮಾವೇಶ ಮಾಡಿದ್ರು. ಅಭೂತ ಪೂರ್ವವಾದ ಪಾದಯಾತ್ರೆ ಮಾಡಿದ್ದಾರೆ. ಇದು ಸಾಧ್ಯನಾ ಎಂಬ ಭಾವನೆ ನಮ್ಮಲ್ಲೂ ಕಾಡುತ್ತದೆ. ಹೋರಾಟದ ಫಲವಾಗಿ ಸ್ವಲ್ಪ ದಿನಗಳಲ್ಲಿ ಸಿಹಿ ಸುದ್ದಿ ಬರುತ್ತೆ. ಅಂದು ಹೋರಾಟಕ್ಕೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ‌ ಸಾಕಷ್ಟು ಅವಕಾಶ ಮಾಡಿದ್ರು. ಹೀಗಾಗಿ ಬಸವರಾಜ ಬೊಮ್ಮಾಯಿ‌ ಅವರಿಗೆ ಅಭಿನಂದನೆ ಸಲ್ಲಿಸಬೇಕು.

ನಾವು ರಾಜಕಾರಣದಲ್ಲಿ ಹಾವು ಮುಂಗಿಸಿ ಜೊತೆಗೆ ಎದುರಾಳಿಗಳ ತರ ಕಿತ್ತಾಡಿದ್ರು. ಇಂದು ಸಮುದಾಯದಕ್ಕೆ ಒಂದಾಗಬೇಕಾಗಿದೆ. ಕೂಡಲಸಂಗಮ ಪೀಠ ನಮ್ಮನ್ನು ಒಗ್ಗೂಡಿಸಿದೆ. ಮುಂದುವರಿದ ಸಮುದಾಯದಕ್ಕೆ ಮೀಸಲಾತಿ ಕೊಡಬೇಕು ಅಂದ್ರೆ ಯಾವುದೇ ಸರ್ಕಾರಕ್ಕೆ ಕಷ್ಟ ಆಗುತ್ತೆ. ನಾನು, ಯತ್ನಾಳ್ ಸಿಎಂ ಜೊತೆಗೆ ಮಾತನಾಡಿ ಬಂದಿದ್ದೇವೆ. ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ವಿಳಂಬವಾದರೂ ಉತ್ತಮ ರಿಸಲ್ಟ್ ಬರುತ್ತೆ ಎಂಬ ನಂಬಿಕೆ ಇದೆ. ಕಾನೂನಿನ ತೊಡಕುಗಳು ಇರೋದ್ರಿಂದ ಎಲ್ಲವೂ ಈಗಲೇ ಕೊಡಲು ಆಗಲ್ಲ..

ಹೀಗಾಗಿ ಸರ್ಕಾರದ ಭಾಗವಾಗಿ ನಾನು ಹೇಳ್ತಿದ್ದೇನೆ. ನಾವು ಎಷ್ಟೇ ಹೋರಾಟ ಮಾಡಿದ್ರು ಕೆಲವೊಮ್ಮೆ ನಮಗೆ ಯಾವುದು ಕೈಗೆ ಸಿಗಲ್ಲ. ಪ್ರತಿಭಟನೆ ಬೇಡ – ಇನ್ನೇರಡು ತಿಂಗಳಲ್ಲಿ ಸಿಹಿ ಸುದ್ದಿ ಸಿಗುತ್ತೆ ಎಂದು ಸಚಿವ ಸಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

39 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago