ಬೆಳಿಗ್ಗೆ ಪದವಿಗೆ ರಾಜೀನಾಮೆ…ಸಂಜೆ ಮತ್ತೆ ಮುಖ್ಯಮಂತ್ರಿ : ಇದು ಬಿಹಾರದ ನಿತೀಶ್ ಕುಮಾರ್ ಸ್ಟೈಲ್

ಸುದ್ದಿಒನ್ : ಬಿಹಾರದಲ್ಲಿ ರಾಜಕೀಯ ಬದಲಾವಣೆಗಳು ಶರ ವೇಗದಲ್ಲಿ ಬದಲಾಗುತ್ತಿವೆ. ರಾಜ್ಯದ ಮುಖ್ಯಮಂತ್ರಿ ಮತ್ತು ಜನತಾದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ಸಲ್ಲಿಸಿದರು. 

ಭಾನುವಾರ ಬೆಳಗ್ಗೆ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ ನಂತರ ಅವರು ಪಾಟ್ನಾದ ರಾಜಭವನ ತಲುಪಿದರು. ಮಹಾಘಟಬಂಧನ್ ಜೊತೆಗಿನ ಮೈತ್ರಿಯನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ ಎಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಮತ್ತೊಂದೆಡೆ, ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸಂಜೆ 4 ಗಂಟೆಗೆ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರೊಂದಿಗೆ ಅವರು 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ ಜತೆಗಿನ ಮೈತ್ರಿ ಕಡಿದುಕೊಂಡು ಬಿಜೆಪಿ ಜತೆ ಕೈಜೋಡಿಸಲು ಸಿಎಂ ನಿತೀಶ್ ಸಿದ್ಧರಾಗಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬಿಜೆಪಿ ಪಕ್ಷದ ಸಹಭಾಗಿತ್ವದಲ್ಲಿ ಮತ್ತೆ ಹೊಸ ಸರ್ಕಾರ ರಚಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಭಾನುವಾರ ಬೆಳಗ್ಗೆ ಪಾಟ್ನಾದ ತಮ್ಮ ಪಕ್ಷದ ಕೇಂದ್ರ ಕಚೇರಿಯಲ್ಲಿ ಜೆಡಿಯು ಶಾಸಕರೊಂದಿಗೆ ಸಭೆ ನಡೆಸಿದ ನಿತೀಶ್ ಕುಮಾರ್ ಅವರು ರಾಜ್ಯಪಾಲರ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿದರು.

ಮತ್ತೊಂದೆಡೆ, ರಾಜ್ಯ ಬಿಜೆಪಿ ಶಾಸಕರು ಪಾಟ್ನಾದ ತಮ್ಮ ಪಕ್ಷದ ಕಚೇರಿಯಲ್ಲಿ ಸಭೆ ಸೇರಲಿದ್ದಾರೆ. ಆದರೆ, ಬಿಜೆಪಿ ಶಾಸಕ ಮೋತಿಲಾಲ್ ಪ್ರಸಾದ್ ಈ ವಿಚಾರವಾಗಿ ಪ್ರಮುಖ ಪ್ರತಿಕ್ರಿಯೆ ನೀಡಿದ್ದು, ನಿತೀಶ್ ಕುಮಾರ್ ಜೊತೆ ಸರ್ಕಾರ ರಚಿಸುವ ಬಗ್ಗೆ ಪಕ್ಷದ ವರಿಷ್ಠರಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಮೋತಿಲಾಲ್ ಹೇಳಿದ್ದಾರೆ.

ಆದರೆ, ರಾಜಕೀಯದಲ್ಲಿ ಏನು ಬೇಕಾದರೂ ಸಾಧ್ಯ ಎಂದು ಹೇಳಿದ್ದಾರೆ. ಮತ್ತೊಂದೆಡೆ, ಜೆಡಿಯು ನಾಯಕ ನೀರಜ್ ಕುಮಾರ್ ಕೂಡ ಈ ವಿಷಯದ ಬಗ್ಗೆ ಪ್ರಮುಖ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳಬೇಕು.
ಪಾದಯಾತ್ರೆಗೆ ಹೋದಲ್ಲೆಲ್ಲಾ ಅಡೆತಡೆಗಳು ಎದುರಾಗುತ್ತಿದ್ದು, ತಂತ್ರಗಳ ವೈಫಲ್ಯದ ಬಗ್ಗೆ ಪರಾಮರ್ಶೆ ನಡೆಸುವಂತೆ ಸೂಚಿಸಲಾಗಿದೆ. ಮಿತ್ರಪಕ್ಷಗಳು ಏಕೆ ದೂರ ಸರಿಯುತ್ತಿವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

43 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago