Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಂ ಸಮುದಾಯದವರ ವ್ಯಾಪಾರಕ್ಕೆ ನಿರ್ಬಂಧ : ಹಿಜಾಬ್ ನಂತೆ ಇದು ರಾಜ್ಯದೆಲ್ಲೆಡೆ ಪಸರಿಸಿಬಿಡುತ್ತಾ..?

Facebook
Twitter
Telegram
WhatsApp

ಉಡುಪಿ: ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರ ಮಾಡಲು ನಿಷೇಧ ಹೇರಲಾಗಿದೆ. ಇದು ಈಗ ಎಲ್ಲೆಡೆ ವ್ಯಾಪಿಸಿದೆ. ಕೇವಲ ಮಾರಿಗುಡಿ ದೇವಸ್ಥಾನದಲ್ಲಿ ಮಾತ್ರ ಅಲ್ಲ ರಾಜ್ಯದ ಹಲವೆಡೆ ನಡೆಯುವ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳನ್ನ ನಿಷೇಧ ಮಾಡಲಾಗಿದೆ. ಹಿಜಾಬ್ ವಿಚಾರ ಉಡುಪಿಯಲ್ಲಿ ಶುರುವಾಗಿ ಹೇಗೆ ರಾಜ್ಯವ್ಯಾಪಿ ಪಸರಿಸಿತ್ತೋ ಇದು ಹಾಗೆಯೇ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ಮಂಗಳೂರು ಮಾತ್ರವಲ್ಲ ಮಲೆನಾಡಿನ ಭಾಗದಲ್ಲೂ ಈ ರೀತಿಯ ಘಟನೆಗಳು ಕಾಣಿಸುತ್ತಿವೆ‌. ಭಜರಂಗದಳದ ವ್ಯಾಪಾರಸ್ಥರು ಟೆಂಡರ್ ತೆಗೆದುಕೊಂಡು, ನಮಗೆ ಬೇಕಾದ ವ್ಯಾಪಾರಿಗಳಿಗೆ ಅವಕಾಶ ನೀಡುತ್ತೇವೆಂದು ಹೇಳಿದ್ದಾರೆ. ಇದೀಗ ಪುತ್ತೂರು ಜಾತ್ರೆಯಲ್ಲೂ ನಿಷೇಧ ಹೇರಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ಮಹಾಲಿಂಗೇಶ್ವರ ದೇಗುಲ ಜಾತ್ರೆಯಲ್ಲೂ ನಿಷೇಧ ಹೇರಲಾಗಿದೆ. ಈ ಜಾತ್ರೆಯಲ್ಲಿ ಹಿಂದೂಗಳಿಗೆ ಮಾತ್ರ ಅಂಗಡಿಯಾಕಲು ಅನುಮತಿ ಸಿಕ್ಕಿದೆ. ಹರಾಜು ಪ್ರಕ್ರಿಯೆಯಲ್ಲಿ ಹಿಂದೂಗಳಿಗೆ ಮಾತ್ರ ಅವಕಾಶ ನೀಡಿದ್ದಾರೆ.

ಇನ್ನು ಇಂದಿನಿಂದ ಆರಂಭವಾಗಿರುವ ಶಿವಮೊಗ್ಗದ ಮಾರಿಕಾಂಬ ಜಾತ್ರೆಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಇಲ್ಲಿಯೂ ಮುಸ್ಲಿಂ ಸಮುದಾಯದ ವ್ಯಾಪಾರಿಗಳನ್ನ ನಿಷೇಧ ಮಾಡಿದ್ದಾರೆ. ಹಿಂದೂಗಳು ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಿದ್ದಾರೆ. ಮೂರ್ತಿ ಪೂಜೆ ಮಾಡುವವರಿಗೆ ಮಾತ್ರ ಈ ಬಾರಿ ಮಾರಿಕಾಂಬಾ ಜಾತ್ರೆಯಲ್ಲಿ ಅವಕಾಶ ನೀಡಲಾಗಿದೆ. ಭಕ್ತಿಯಿಂದ ಹಣ್ಣು ಕಾಯಿ ಮಾರಬೇಕು. ಮುಸ್ಲಿಂ ಅವರು ಮೂರ್ತಿ ಪೂಜೆ ಮಾಡಲ್ಲ. ಹೀಗಾಗಿ ಅವರು ವ್ಯಾಪಾರ ಯಾಕೆ ಮಾಡಬೇಕು. ಮೂರ್ತಿ ಪೂಜೆ ಮಾಡದವರಿಂದ ಪೂಜಾ ಸಾಮಾಗ್ರಿ ತಗೊಂಡು ಪೂಜೆ ಸಲ್ಲಿಸಲಾಗುತ್ತಾ. ಹೀಗಾಗಿ ಹಿಂದೂಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಭಜರಂಗದಳದ ಮುಖಂಡ ದೀನ್ ದಯಾಳ್ ಹೇಳಿದ್ದಾರೆ.

ಇನ್ನು ಈ ನಿರ್ಬಂಧ ವಿಚಾರ ಬೆಂಗಳೂರಿಗೂ ಆವರಿಸಿದೆ. ನೆಲಮಂಗಲದ ಜಾತ್ರೆಯಲ್ಲೂ ಮುಸ್ಲಿಂ ಸಮುದಾಯದವರು ವ್ಯಾಪಾರ ಮಾಡಲು ನಿರ್ಬಂಧ ಹೇರಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!