Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿವೃತ್ತ ನೌಕರ ಜಯರಾಮ್ ನಿಧನ

---Advertisement---

ಚಿತ್ರದುರ್ಗ ಆಗಸ್ಟ್. 30 :  ನಗರಸಭೆ ಸದಸ್ಯೆ ಶ್ರೀಮತಿ ನಾಗಮ್ಮ ಅವರ ಪತಿ ಹಾಗೂ ಅರೋಗ್ಯ ಇಲಾಖೆಯ ನಿವೃತ್ತ ನೌಕರ ಜಯರಾಮ್ (82 ವರ್ಷ) ಅವರು ಶುಕ್ರವಾರ ಮುಂಜಾನೆ ನಿಧನ ಹೊಂದಿದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಬಿಡುಗಡೆಯಾದ ಬಳಿಕ ಚಿತ್ರದುರ್ಗದ ವೇದಾಂತ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ

ಮೃತರು ಪತ್ನಿ , ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು  ಅಗಲಿದ್ದಾರೆ.  ಜಯರಾಮ್ ಅವರ ಪುತ್ರ ಮಹೇಶ್ ಮೂರು ಅವಧಿಗೆ ನಿರಂತರವಾಗಿ ನಗರಸಭೆಗೆ ಸದಸ್ಯರಾಗಿ ಆಯ್ಕೆ ಆಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪತ್ನಿ ಶ್ರೀಮತಿ ನಾಗಮ್ಮ ಅವರು ಚುನಾವಣೆ ಸ್ಪರ್ಧಿಸಿ ಗೆದ್ದಿದ್ದರು. ಮೃತರ ಅಂತ್ಯ ಕ್ರಿಯೆ ಶುಕ್ರವಾರ ಸಂಜೆ ಜೋಗಿಮಟ್ಟಿ ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.

ಜಯರಾಮ್ ಅವರ ನಿಧನ ವಿಷಯ ತಿಳಿದ ಕೂಡಲೇ ಅಪಾರ ಸಂಖ್ಯೆಯಲ್ಲಿ ಬಂದುಗಳು ಸಾರ್ವಜನಿಕರು ಮತ್ತು ರಾಜಕೀಯ ಮುಖಂಡರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ನಗರ ಸಭೆ ಅಧ್ಯಕ್ಷೆ ಸುಮಿತಾ ,ಉಪಾದ್ಯಕ್ಷರಾದ ಶ್ರೀದೇವಿ ಸದಸ್ಯರಾದ ಹೆಚ್ .ಭಾಸ್ಕರ್ , ಹೆಚ್. ಶ್ರೀನಿವಾಸ್ . ರಮೇಶ್ .ವೆಂಕಟೇಶಪ್ಪ , ದಾರುಕ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ರಾಮಸ್ವಾಮಿ,  ಗುತ್ತಿಗೆದಾರ ಶಿವಕುಮಾರ್ . ಅಶೋಕ್ , ಸೇರಿದಂತೆ ಹಲವಾರು ಆಗಮಿಸಿ ನಮನ ಸಲ್ಲಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment