Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭರಮಸಾಗರ ಗೃಹರಕ್ಷಕ ದಳದ ಘಟಕ ಅಧಿಕಾರಿ ಹೆಚ್. ಪ್ರಕಾಶ್ ನಿವೃತ್ತಿ : ಗೃಹರಕ್ಷಕ ದಳದ ಸಿಬ್ಬಂದಿಯಿಂದ ಆತ್ಮೀಯ ಬೀಳ್ಕೊಡುಗೆ

---Advertisement---

ಸುದ್ದಿಒನ್, ಭರಮಸಾಗರ, ಆಗಸ್ಟ್. 18 : ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದ ಭರಮಸಾಗರ ಘಟಕದಲ್ಲಿ ಘಟಕ ಅಧಿಕಾರಿಯಾಗಿ ಸುದೀರ್ಘ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹೆಚ್. ಪ್ರಕಾಶ್ ಅವರಿಗೆ ಇಂದು (ಆಗಸ್ಟ್. 18, ಮಂಗಳವಾರ) ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದ ಭರಮಸಾಗರ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ, ನಿವೃತ್ತರಾದ ಹೆಚ್. ಪ್ರಕಾಶ್ ಅವರ ಸೇವೆಯನ್ನು ಮುಕ್ತಕಂಠದಿಂದ ಸ್ಮರಿಸಲಾಯಿತು. ಅವರ ಅಪಾರ ಕೊಡುಗೆಯನ್ನು ಪ್ರಶಂಸಿಸಿ, ಅವರ ನಿವೃತ್ತ ಜೀವನವು ಸುಖ, ಶಾಂತಿ, ನೆಮ್ಮದಿ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ಎಂದು ಘಟಕದ ವತಿಯಿಂದ ಹೃತ್ಪೂರ್ವಕವಾಗಿ ಹಾರೈಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗ ಗೃಹರಕ್ಷಕ ದಳದ ಸಮಾದೇಷ್ಠರಾದ ಸಿ.ಕೆ. ಸಂಧ್ಯಾ, ಉಪಸಮಾದೇಷ್ಠರಾದ ಲೋಕೇಶ್ ಜಿ.ಹೆಚ್, ಸಹಾಯಕ ಬೋಧಕರಾದ ಶರಣಬಸವರಾಜ್, ವೆಂಕಟೇಶ್ ಹಾಗೂ ಭರಮಸಾಗರ ಘಟಕದ ಸಿಬ್ಬಂದಿ ವರ್ಗ ಮತ್ತು ಗೃಹರಕ್ಷಕರು ಉಪಸ್ಥಿತರಿದ್ದು ಶುಭ ಕೋರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now