Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂನ್‌. 02 : ಸರ್ಕಾರಿ ಸೇವೆಯಲ್ಲಿ ಬಡ್ತಿ ಎನ್ನುವುದು ಪ್ರತಿಯೊಬ್ಬ ಉದ್ಯೋಗಿಯ ಕನಸು. ವರ್ಷಗಳ ಶ್ರಮ, ಸೇವಾ ಹಿರಿತನ ಮತ್ತು ನಿಷ್ಠೆಗೆ ಸಿಗುವ ಮಾನ್ಯತೆಯೇ ಪದೋನ್ನತಿ. ಆದರೆ ಆ ಬಹುನಿರೀಕ್ಷಿತ ಬಡ್ತಿ ದೊರೆತ ಮರುದಿನವೇ ನಿವೃತ್ತಿಯಾಗಬೇಕಾದರೆ ಅದು ಸಂತಸದ ಜೊತೆಗೆ ಒಂದು ರೀತಿಯ ಬೇಸರವನ್ನೂ ಉಂಟುಮಾಡುತ್ತದೆ. ಇಂತಹ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಸೇವೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸ್ಕಿಲ್ ಟ್ರೇಡ್ಸ್‌ಮನ್ (ವೃಂದ–ಸಿ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈ.ಕೆ. ಮಲ್ಲಪ್ಪ ಅವರಿಗೆ ಹಲವು ವರ್ಷಗಳ ಸೇವೆಯ ಬಳಿಕ ಸೇವಾ ಹಿರಿತನದ ಆಧಾರದ ಮೇಲೆ ಸೇವಾ ಅಭಿಯಂತರರು (ವೃಂದ–ಬಿ) ಹುದ್ದೆಗೆ ಪದೋನ್ನತಿ ನೀಡಿ ಮೇ 29ರಂದು ಇಲಾಖೆ ಆದೇಶ ಹೊರಡಿಸಿತ್ತು.

1966ರ ಜೂನ್ 1ರಂದು ಜನಿಸಿದ ಮಲ್ಲಪ್ಪ ಅವರು ಮೇ 31ರಂದು 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಿವೃತ್ತಿಯಾಗಬೇಕಾಗಿತ್ತು. ಆದರೆ ಮೇ 31 ಭಾನುವಾರ ಸರ್ಕಾರಿ ರಜೆ ಆಗಿದ್ದರಿಂದ, ನಿಯಮಾನುಸಾರ ಮೇ 30ರ ಮಧ್ಯಾಹ್ನವೇ ಇಲಾಖೆಯು ಅವರನ್ನು ಸರ್ಕಾರಿ ಸೇವೆಯಿಂದ ವಿಮುಕ್ತಿಗೊಳಿಸಿದೆ. ಹೀಗಾಗಿ ಮೇ 29ರಂದು ಪದೋನ್ನತಿ ಆದೇಶ ಪಡೆದ ಮಲ್ಲಪ್ಪ ಅವರು ಮೇ 30ರ ಬೆಳಗ್ಗೆ ಹೊಸ ಹುದ್ದೆಯ ಅಧಿಕಾರವನ್ನು ಸ್ವೀಕರಿಸಿ, ಕೇವಲ ಒಂದೇ ದಿನದೊಳಗೆ ಸಂಜೆ ನಿವೃತ್ತಿ ಹೊಂದುವ ಅಪರೂಪದ ಅನುಭವಕ್ಕೆ ಸಾಕ್ಷಿಯಾದರು.

ವರ್ಷಗಳ ಕಾಲ ಪದೋನ್ನತಿಗಾಗಿ ಕಾಯುತ್ತಿದ್ದ ಮಲ್ಲಪ್ಪ ಅವರಿಗೆ ಕೊನೆ ಕ್ಷಣದಲ್ಲಿ ಬಡ್ತಿ ದೊರೆತಿರುವುದು ಸಂತಸದ ಸಂಗತಿಯಾದರೆ, ಆ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಹೆಚ್ಚಿನ ಅವಕಾಶ ಸಿಗದಿರುವುದು ಸಹಜವಾಗಿಯೇ ಬೇಸರ ಮೂಡಿಸಿದೆ. ಆದರೂ ನಿವೃತ್ತಿಯ ಹೊತ್ತಿನಲ್ಲಿ ಉನ್ನತ ಹುದ್ದೆಯೊಂದಿಗೆ ಸೇವಾ ಬದುಕಿಗೆ ತೆರೆ ಎಳೆದಿರುವುದು ಅವರ ವೃತ್ತಿಜೀವನದ ವಿಶೇಷ ಅಧ್ಯಾಯವಾಗಿ ಉಳಿದಿದೆ.

ಸರ್ಕಾರಿ ಸೇವೆಯಲ್ಲಿ ಬಡ್ತಿ ಮತ್ತು ನಿವೃತ್ತಿ ಒಂದೇ ಸಂದರ್ಭದಲ್ಲಿ ಎದುರಾದ ಈ ಘಟನೆ ಇಲಾಖೆಯ ಸಿಬ್ಬಂದಿ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಬಡ್ತಿ ಸಿಕ್ಕ ಖುಷಿ, ಮರುದಿನವೇ ನಿವೃತ್ತಿಯ ಬೇಸರ ಎಂಬ ಅಪರೂಪದ ಕ್ಷಣಕ್ಕೆ ಮಲ್ಲಪ್ಪ ಅವರು ಸಾಕ್ಷಿಯಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now