ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ :  ಡಿಸೆಂಬರ್ 7 ರಂದು ಪ್ರಮಾಣ ವಚನ

ಸುದ್ದಿಒನ್, ಹೈದರಾಬಾದ್, ಡಿಸೆಂಬರ್.05 : ತೆಲಂಗಾಣದಲ್ಲಿ ನೂತನ ಸಿಎಂ ಅಭ್ಯರ್ಥಿ ಘೋಷಣೆಗೆ ಕೊನೆಗೂ ತೆರೆ ಬಿದ್ದಿದೆ. ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿಯನ್ನು ಕಾಂಗ್ರೆಸ್ ವರಿಷ್ಠರು ಅಧಿಕೃತವಾಗಿ ಘೋಷಿಸಿದ್ದಾರೆ. 

ಟಿಪಿಸಿಸಿ ಅಧ್ಯಕ್ಷರಾಗಿರುವ ರೇವಂತ್ ರೆಡ್ಡಿ ಅವರನ್ನು ಸಿಎಲ್ ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೆ.ಸಿ.ವೇಣುಗೋಪಾಲ್ ದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಪ್ರಕಟಿಸಿದರು.

ಈ ಮೂಲಕ ನಿನ್ನೆಯಿಂದ ನಡೆಯುತ್ತಿದ್ದ ಸಸ್ಪೆನ್ಸ್ ಗೆ ಕಾಂಗ್ರೆಸ್ ವರಿಷ್ಠರು ತೆರೆ ಎಳೆದಿದ್ದಾರೆ.  ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿಯನ್ನು ಘೋಷಿಸಿದ ಹೈ ಕಮಾಂಡ್,  ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದೆ.

ರೇವಂತ್ ರೆಡ್ಡಿ ಜತೆಗೆ ಇನ್ನೂ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಅಭ್ಯರ್ಥಿ ಘೋಷಣೆಗೂ ಮುನ್ನವೇ ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ರೇವಂತ್ ರೆಡ್ಡಿಗೆ ಕರೆ ಬಂದಿದ್ದು, ದೆಹಲಿಗೆ ದೌಡಾಯಿಸಿದ್ದಾರೆ.

ತೆಲಂಗಾಣ ಸಿಎಂ ಎಂದು ಘೋಷಿಸಿದ ನಂತರ ರೇವಂತ್ ರೆಡ್ಡಿ ಟ್ವೀಟ್ ಮಾಡಿದ್ದಾರೆ. ತಮ್ಮನ್ನು ಸಿಎಲ್‌ಪಿ ನಾಯಕನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಪಕ್ಷದ ನಾಯಕರಿಗೆ ಧನ್ಯವಾದ ಅರ್ಪಿಸಿ ರೇವಂತ್ ಟ್ವೀಟ್ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಣಿಕರಾವ್ ಠಾಕ್ರೆ ಅವರಿಗೆ ರೇವಂತ್ ರೆಡ್ಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಬಂದಾಗಿನಿಂದ ಕಾಂಗ್ರೆಸ್ ಪಕ್ಷದಿಂದ ಸಿಎಂ ಅಭ್ಯರ್ಥಿ ಯಾರಾಗುತ್ತಾರೆ ಎಂಬ ತೀವ್ರ ಕಸರತ್ತು ನಡೆಯುತ್ತಲೇ ಇತ್ತು. ನಿನ್ನೆ ಗಾಂಧಿ ಭವನದಲ್ಲಿ ಸಿಎಲ್‌ಪಿ ಸಭೆ ನಡೆದಿತ್ತು. ಸಿಎಲ್‌ಪಿ ನಾಯಕರ ಆಯ್ಕೆ ವಿಚಾರವನ್ನು ಸಂಪೂರ್ಣವಾಗಿ  ವರಿಷ್ಠರಿಗೆ ವಹಿಸಿ ಎಐಸಿಸಿಗೆ ಕಳುಹಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು.

ರೇವಂತ್ ರೆಡ್ಡಿಗೆ ಸಿಎಂ ಆಗಲು ಶಾಸಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಯಕತ್ವವೂ ಒಲವು ತೋರಿದೆ. ಆದರೆ ಕೆಲ ಹಿರಿಯ ನಾಯಕರು ಒಪ್ಪಲಿಲ್ಲ. ಈ ಬಗ್ಗೆ ಒಂದಷ್ಟು ಕಸರತ್ತು ನಡೆದಿದೆ. ಇಂದು ಬೆಳಗ್ಗೆಯೂ ತೆಲಂಗಾಣ ಸಿಎಂ ಅಭ್ಯರ್ಥಿ ಘೋಷಣೆ ಕುರಿತು ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದರು.

ಇಂದು ಸಂಜೆಯೊಳಗೆ ತೆಲಂಗಾಣ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಮತ್ತೊಂದೆಡೆ ಸಿಎಂ ರೇಸ್‌ನಲ್ಲಿರುವ ಟಿ.ಕಾಂಗ್ರೆಸ್‌ನ ಹಿರಿಯ ನಾಯಕರಾದ ಭಟ್ಟಿ ವಿಕ್ರಮಾರ್ಕ ಹಾಗೂ ಉತ್ತಮ್‌ಕುಮಾರ್‌ ರೆಡ್ಡಿ ದೆಹಲಿ ತಲುಪಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

ಇದೇ ವೇಳೆ ಉತ್ತಮ್ ಕುಮಾರ್ ರೆಡ್ಡಿ ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ತೆಲಂಗಾಣ ವೀಕ್ಷಕ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ರಾಹುಲ್, ಕೆ.ಸಿ.ವೇಣುಗೋಪಾಲ್, ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರೇವಂತ್ ರೆಡ್ಡಿ ಅವರನ್ನು ಸಿಎಂ ಎಂದು ಘೋಷಿಸುವ ಜತೆಗೆ ಮುಖ್ಯಮಂತ್ರಿ ಎಂದು ಘೋಷಣೆಯಾದರೆ ಉಳಿದ ವರಿಷ್ಠರು ಮುಖಂಡರ ಬೇಡಿಕೆಗಳ ಬಗ್ಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದರು.  ಪ್ರಮುಖರ ಸಭೆಯ ನಂತರ ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೆಸರನ್ನು ಅಂತಿಮಗೊಳಿಸಲಾಯಿತು.  ಈ ನಿರ್ಧಾರವನ್ನು ಕೆಸಿ ವೇಣುಗೋಪಾಲ್ ಪ್ರಕಟಿಸಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago