Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

---Advertisement---

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. ಇಂದು ಅಂತರಾಷ್ಟ್ರೀಯ ಕ್ರಿಕೆಟ್ ಗೆ ಇಂದು ವಿದಾಯ ಘೋಷಿಸಿದ್ದಾರೆ. ಡೇವಿಡ್ ವಾರ್ನರ್ ಕ್ರಿಸ್ ಗೆ ಇಳಿದರೆ ದೈತ್ಯ ಆಟಗಾರನಾಗಿ ಎಲ್ಲರಿಗೂ ಕಾಣಿಸುತ್ತಿದ್ದರು. ಆದರೆ ಇಂದಿನ ವಿದಾಯ ಎಲ್ಲರಿಗೂ ಶಾಕಿಂಗ್ ಎನಿಸಿದೆ.

ಇನ್ನು ಡೇವಿಡ್ ವಾರ್ನರ್ ವಿದಾಯ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಗೆ ಬೇಸರ ತರಿಸಿದೆ. ಈ ಕುರಿತು ಭಾವುಕರಾಗಿ ಮಾತನಾಡಿದ್ದಾರೆ. ನಾನು ಮತ್ತೊಬ್ಬ ವಾರ್ನರ್ ಅನ್ನು ಹುಡುಕುವುದು ಸುಲಭದ ಕೆಲಸವಲ್ಲ. ಡೇವಿಡ್ ವಾರ್ನರ್ ನಿವೃತ್ತಿ ಆಸ್ಟ್ರೇಲಿಯಾ ತಂಡದ ಮೇಲೆ ಬಹಳಷ್ಟು ದೊಡ್ಡ ಪರಿಣಾಮವನ್ನು ಬೀರಲಿದೆ ಎಂದಿದ್ದಾರೆ.

 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 383 ಪಂದ್ಯಗಳನ್ನು ಆಡಿದ್ದ ಡೇವಿಡ್ ವಾರ್ನರ್ ಅವರು 18995 ರನ್, 49 ಶತಕ, 98 ಅರ್ಧ ಶತಕವನ್ನು ಸಿಡಿಸಿದ್ದಾರೆ. ಡೇವಿಡ್ ವಾರ್ನರ್ ಅವರು 2024 ಜನವರಿಯಲ್ಲೇ ಒನ್ ಡೇ ಮತ್ತು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದರು. 2024ರ ಟಿ20 ವಿಶ್ವಕಪ್‌ನಲ್ಲಿ ಉತ್ತಮ ಸಾಧನೆ ಮಾಡಿ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಮ್ಮೆ ಚಾಂಪಿಯನ್ ಆಗುವ ಮಹದಾಸೆಯಲ್ಲಿದ್ದರು. ಟಿ20 ವಿಶ್ವಕಪ್‌ನಲ್ಲಿ ಗೆದ್ದು ಗೆಲುವಿನೊಂದಿಗೆ ವಿದಾಯ ಹೇಳಲು ಡೇವಿಡ್ ವಾರ್ನರ್ ಬಯಸಿದ್ದರು. ಆದರೆ ಅದು ಸಾಧ್ಯವಾಗಲೇ ಇಲ್ಲ. ಟಿ20 ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ಸೋಲು ಕಂಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment