Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು : ಅಂಥದ್ದೇನಾಯ್ತು..?

---Advertisement---

ಬಾಗಲಕೋಟೆ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಮೂರುವರೆ ವರ್ಷದಿಂದ ನಡೆಯುತ್ತಿದೆ. ಸರ್ಕಾರಕ್ಕೆ ಸಾಕಷ್ಟು ಬಾರಿ ಕೊನೆಯ ಎಚ್ಚರಿಕೆಯನ್ನು ಕೊಡುವ ಪ್ರಯತ್ನ ಮಾಡಿದ್ದಾರೆ. ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಿದೆ. ಮೀಸಲಾತಿ ಹೋರಾಟಕ್ಕೆ ಬಿಜೆಪಿ ಸರ್ಕಾರವಿದ್ದಾಗ ಶಾಸಕ ಯತ್ನಾಳ್ ಸೇರಿದಂತೆ ಸಾಕಷ್ಟು ಶಾಸಕರು ಬೆಂಬಲ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಬಂದಾಗಲೂ ಕಾಂಗ್ರೆಸ್ ಶಾಸಕರು, ಸಚಿವರೇ ಬೆಂಬಲ ನೀಡಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್, ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ ಈಗ ಪಂಚಮಸಾಲಿ ಹೋರಾಟದಲ್ಲಿಯೇ ಬಿರುಕು ಕಾಣಿಸಿಕೊಂಡಿದೆ.

ಈ ಸಂಬಂಧ ಕೂಡಲಸಂಗಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರತ್ಯೇಕ ಸಭೆ ಮಾಡಿದ್ದಾರೆ. ಆ ಮೂಲಕ ಸ್ವಾಮೀಜಿ ವಿರೋಧವಾಗಿ ಪೀಠದಲ್ಲೇ ಸಭೆ ನಡೆಸಿ, ಸೆಡ್ಡು ಹೊಡೆದಿದ್ದಾರೆ.ವಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಪೀಠದಲ್ಲಿ ಪ್ರಮುಖ ಮುಖಂಡರ ನೇತೃತ್ವದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಶಾಸಕ ಕಾಶಪ್ಪನವರ್ ಮಾಡಿದ್ದಾರೆ. ಈ ಸಭೆಯಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಟ್ರ್ಯಾಕ್ಟರ್ ರ್ಯಾಲಿ ಮಾಡಲು ಮುಂದಾಗಿರುವ ಸ್ವಾಮೀಜಿ ತೀರ್ಮಾನಕ್ಕೆ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರುವರೆ ವರ್ಷದಿಂದ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈಗ ಏಳನೇ ಹಂತದ ಹೋರಾಟ ಶುರುವಾಗಿದೆ. ಮುಖ್ಯಮಂತ್ರಿ ನಿರ್ಲಕ್ಷ್ಯ, ಸರ್ಕಾರದ ಅಸಡ್ಡೆ ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ಡಿಸೆಂಬರ್ 10ಕ್ಕೆ ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲಿದ್ದೇವೆ. ಇವತ್ತಿನ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಾತು ತಪ್ಪಿದರು, ಬೆಂಗಳೂರಿಗೆ ಕರೆದು ಸಿದ್ದರಾಮಯ್ಯ ಅವರು ಎರಡು ಗಂಟೆ ಚರ್ಚೆ ನಡರಸಿದರು, ಸಿಎಂ ಭರವಸೆ ಕೊಟ್ಟಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment