Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣಪತಿ ಬಿಡುವ ವೇಳೆ ಗಲಭೆ : ಈಗ ನಾಗಮಂಗಲ ಸ್ಥಿತಿ ಹೇಗಿದೆ..?

---Advertisement---

 

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಗಲಭೆ ನಡೆದಿದೆ. ಕೆಲ ಮುಸ್ಲಿಂ ಸಮುದಾಯದವರು ಗಣಪತಿ ಮೂರ್ತಿ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ವೇಳೆ ಕೆಲ ಅಂಗಡಿಗಳಿಗೂ ಬೆಂಕಿ ಇಟ್ಟಿದ್ದಾರೆ.

ಬುಧವಾರ ಸಂಜೆ 6.30ರ ಸುಮಾರಿಗೆ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಿಂದ ಗಣೇಶ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಮಂಡ್ಯ ಸರ್ಕಲ್ ಮಾರ್ಗವಾಗಿ ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್ ನೊಂದಿಗೆ ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಅಲ್ಲಿಂದ ಯಾ ಅಲ್ಲಾ ಮಸೀದಿ ಹಾಗೂ ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಿಂದೂ ಕಾರ್ಯಕರ್ತರು ಜೈಶ್ರೀರಾಮ್ ಘೊಇಷಣೆಯನ್ನು ಕೂಗಿದ್ದಾರೆ. ಇದೇ ವೇಳೆ ಮಸೀದಿಯೊಳಗಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಅಂತ ಜೋರಾಗಿ ಕೂಗಿದ್ದಾರೆ ಎನ್ನಲಾಗಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಗಣೇಶ‌ ಮೂರ್ತಿಯನ್ನು ಪೊಲೀಸ್ ಠಾಣೆಯ ಮುಂದೆಯೇ ಇರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ 52 ಮಂದಿಯನ್ನು ಬಂಧಿಸಲಾಗಿದೆ. ಅವಶ್ಯಕತೆ ಬಿದ್ರೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ. ಪೊಲೀಸರು ಹತೋಟಿಗೆ ತಂದಿದ್ದಾರೆ. ಪ್ರಾಣಹಾನಿಯಂತ ಸಮಸ್ಯೆಗಳು ಆಗಿಲ್ಲ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡುತ್ತೇನೆ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾರೆ. ಸದ್ಯ ನಾಗಮಂಗಲದ ಪರಿಸ್ಥಿತಿ ಹತೋಟಿಯಲ್ಲಿದ್ದು, ಸೆಪ್ಟೆಂಬರ್ 14ರವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

 

ಗಣಪರಿ ಬಿಡುವ ವೇಳೆ ಗಲಭೆ : ಈಗ ನಾಗಮಂಗಲ ಸ್ಥಿತಿ ಹೇಗಿದೆ..?

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಗಲಭೆ ನಡೆದಿದೆ. ಕೆಲ ಮುಸ್ಲಿಂ ಸಮುದಾಯದವರು ಗಣಪತಿ ಮೂರ್ತಿ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ವೇಳೆ ಕೆಲ ಅಂಗಡಿಗಳಿಗೂ ಬೆಂಕಿ ಇಟ್ಟಿದ್ದಾರೆ.

ಬುಧವಾರ ಸಂಜೆ 6.30ರ ಸುಮಾರಿಗೆ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಿಂದ ಗಣೇಶ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಮಂಡ್ಯ ಸರ್ಕಲ್ ಮಾರ್ಗವಾಗಿ ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್ ನೊಂದಿಗೆ ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಅಲ್ಲಿಂದ ಯಾ ಅಲ್ಲಾ ಮಸೀದಿ ಹಾಗೂ ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಿಂದೂ ಕಾರ್ಯಕರ್ತರು ಜೈಶ್ರೀರಾಮ್ ಘೊಇಷಣೆಯನ್ನು ಕೂಗಿದ್ದಾರೆ. ಇದೇ ವೇಳೆ ಮಸೀದಿಯೊಳಗಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಅಂತ ಜೋರಾಗಿ ಕೂಗಿದ್ದಾರೆ ಎನ್ನಲಾಗಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಗಣೇಶ‌ ಮೂರ್ತಿಯನ್ನು ಪೊಲೀಸ್ ಠಾಣೆಯ ಮುಂದೆಯೇ ಇರಿಸಿ, ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ 52 ಮಂದಿಯನ್ನು ಬಂಧಿಸಲಾಗಿದೆ. ಅವಶ್ಯಕತೆ ಬಿದ್ರೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ. ಪೊಲೀಸರು ಹತೋಟಿಗೆ ತಂದಿದ್ದಾರೆ. ಪ್ರಾಣಹಾನಿಯಂತ ಸಮಸ್ಯೆಗಳು ಆಗಿಲ್ಲ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡುತ್ತೇನೆ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾರೆ. ಸದ್ಯ ನಾಗಮಂಗಲದ ಪರಿಸ್ಥಿತಿ ಹತೋಟಿಯಲ್ಲಿದ್ದು, ಸೆಪ್ಟೆಂಬರ್ 14ರವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment