ಮದಕರಿಪುರದ ಬಳಿ ರಸ್ತೆ ಅಪಘಾತ : ಓರ್ವ ಸಾವು

0 Min Read

 

 

ಸುದ್ದಿಒನ್, ಚಿತ್ರದುರ್ಗ, (ಜು.23) : ತಾಲ್ಲೂಕಿನ ಮದಕರಿ ಪುರದ ಬಳಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾನ್ಹ ನಡೆದಿದೆ.ಮೃತನನ್ನು ಮದಕರಿ ಪುರ ಗ್ರಾಮದ ವಾಸಿ ನರಸಿಂಹ ಸ್ವಾಮಿ ಎಂದು ಗುರುತಿಸಲಾಗಿದೆ.

ಈ ವೇಳೆ ಶಾಸಕ ಕೆ.ಸಿ. ವೀರೇಂದ್ರ ಅವರು ಅದೇ ರಸ್ತೆಯ ಮೂಲಕ ಹಾದುಹೋಗುತ್ತಿದ್ದರು. ಅಪಘಾತವಾಗಿರುವುದನ್ನು ಗಮನಿಸಿ ಕೂಡಲೇ ನೆರವಿಗೆ ಧಾವಿಸಿದರು. ಅಷ್ಟರಲ್ಲಾಗಲೇ ಬೈಕ್ ಸವಾರ ಸಾವನ್ನಪ್ಪಿದ್ದರೆಂದು ಸ್ಥಳೀಯರು ತಿಳಿಸಿದರು.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *