Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು : ಕಿರಣ್ ಮಜುಂದಾರ್ ಗೆ ಡಿಕೆಶಿ ತಿರುಗೇಟು..!

---Advertisement---

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳು ಜಾಸ್ತಿನೆ ಇದಾವೆ. ಉದ್ಯಮಿ ಕಿರಣ್ ಮಜುಂದಾರ್ ಗುಂಡಿಗಳ ಬಗ್ಗೆ ಮಾತನಾಡಿದ್ದಾರೆ. ಯಾಕೆ ಬೆಂಗಳೂರು ನಗರದ ರಸ್ತೆಗಳು ಹಾಳಾಗಿವೆ..? ಕಂಡ ಕಂಡಲ್ಲಿ ಕಸದ ರಾಶಿ ಇದೆ..? ಇಲ್ಲಿನ ಸರ್ಕಾರ ಹೂಡಿಕೆದಾರರಿಗೆ ಬೆಂಬಲ ನೀಡುತ್ತಿಲ್ಲವೆ ಎಂದು ಚೀನಾದಿಂದ ಬಂದ ಉದ್ಯಮಿಯೊಬ್ಬರು ಪ್ರಶ್ನೆ ಮಾಡಿದರು ಎಂದು ಕಿರಣ್ ಹೇಳಿದ್ದರು.

ಈ ಸಂಬಂಧ ಡಿಸಿಮ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಸವಾಲುಗಳಿ ಇದಾವೆ. ಈಗಾಗಲೇ ಅದರತ್ತ ನಾವೂ ಗಮನ ಹರಿಸಿದ್ದೇವೆ. ರಸ್ತೆ ದುರಸ್ತಿಗೆ ಈಗಾಗಲೇ 1,100 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ನಗರದಲ್ಲಿ 10 ಸಾವಿರ ರಸ್ತೆ ಗುಂಡಿಗಳನ್ನ ಗುರುತಿಸಿದ್ದೇವೆ. ಆ ಪೈಕಿ ಐದು ಸಾವಿರ ಗುಂಡಿಗಳನ್ನ ಮುಚ್ಚಿದ್ದೇವೆ. ಮಹತ್ವದ ಯೋಜನೆಯ ಕೆಲಸ ಕಾರ್ಯಗಳು ಮುಂದುವರೆದಿದ್ದು, ಬೆಂಗಳೂರು ಪೂರ್ವ ಪಾಲಿಕೆಯಲ್ಲಿ ಸಾಕಷ್ಟು ಕೆಲಸಗಳು ಆಗುತ್ತಿವೆ. ಈ ಭಾಗದ ಐಟಿ ಬಿಟಿ ಕಂಪನಿಗಳಿಗೆ ಇದರಿಂದ ಸಹಾಯ ಆಗ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಾಕಷ್ಟು ಗುಂಡಿಗಳಿದ್ದು, ವಾಹನ ಸವಾರರಿಗಂತು ದೊಡ್ಡ ಸಮಸ್ಯೆಯೇ ಆಗಿದೆ. ಎಷ್ಟೋ ಕಡೆ ಗಾಡಿಗಳಲ್ಲಿ ಹೋಗುವಾಗ ಬಿದ್ದಿದ್ದಾರೆ. ಹೀಗಾಗಿ ಗುಂಡಿಗಳನ್ನು ಮುಚ್ಚುವ ಕೆಲಸವನ್ನ ಸರ್ಕಾರ ಕೈಗೆತ್ತಿಕೊಂಡಿದೆ. ಇದರ ನಡುವೆಯೇ ಕಿರಣ್ ಮಜುಂದಾರ್ ಈ ರೀತಿ ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...