Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಸ್ತೆ ಸುರಕ್ಷತಾ ಸಪ್ತಾಹ |  ಜನಜಾಗೃತಿ ಎಲ್.ಇ.ಡಿ. ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಚಾಲನೆ

---Advertisement---

 

ಚಿತ್ರದುರ್ಗ. ಫೆ.13: ಅತಿಯಾದ ಪೆಟ್ರೋಲ್ ಇಂಧನಗಳ ಬಳಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಅದರಲ್ಲೂ ಶುದ್ದಗಾಳಿ ಗುಣಮಟ್ಟ ಕಡಿಮೆಯಾಗಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸಾಂಪ್ರದಾಯಕ ಇಂಧನಗಳ ಬದಲಿಗೆ ಎಲೆಕ್ಟ್ರಿಕಲ್ ವಾಹನ ಹಾಗೂ ಸಮೂಹ ಸಾರಿಗೆ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ವತಿಯಿಂದ ಪರಿಸರ ರಕ್ಷಣೆಯ ಧ್ಯೇಯದೊಂದಿಗೆ, ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತಿದೆ.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಜನಜಾಗೃತಿ ಎಲ್.ಇ.ಡಿ ವಾಹನಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು.

ಎಲ್.ಇ.ಡಿ ವಾಹನ ಜಿಲ್ಲೆಯಾಧ್ಯಂತ ಸಂಚರಿಸಿ, ಸಾರ್ವಜನಿಕರಲ್ಲಿ ಪರಿಸರ ರಕ್ಷಣೆ, ರಸ್ತೆ ಸುರಕ್ಷತಾ ಸೂಚನೆಗಳು, ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲಿದೆ. ಸಾರಿಗೆ ಇಲಾಖೆ ವತಿಯಿಂದ 6 ವಿವಿಧ ಬಗೆಯ ಕಿರುಚಿತ್ರಗಳನ್ನು ನಿರ್ಮಿಸಲಾಗಿದೆ.  ಜಾತ್ರೆ, ಸಂತೆ, ಪಟ್ಟಣ, ನಗರ ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಎಲ್.ಇ.ಡಿ ಪರದೆಯ ಮೇಲೆ ಈ ಕಿರುಚಿತ್ರಗಳನ್ನು ಪ್ರದರ್ಶಿಸಲಾಗುವುದು.

ಜನಜಾಗೃತಿ ಎಲ್.ಇ.ಡಿ ವಾಹನಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದ್ರಕುಮಾರ್ ಮೀನಾ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಗ್, ಲೋಕೋಪಯೋಗಿ ಇಲಾಖೆ ರಾಜೇಶ್, ಸಾರಿಗೆ ಅಧಿಕಾರಿಗಳಾದ ಸಿ.ಡಿ.ಹೇಮಂತ್ ಕುಮಾರ್, ಪ್ರಸನ್ನ ಹಾಗೂ ಇತರೆ ಸಿಬ್ಬಂದಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment