Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

2 ತಿಂಗಳೊಳಗೆ ರಸ್ತೆ ಅಗಲೀಕರಣ ಪೂರ್ಣ : ಅಜಯ್ ಕುಮಾರ್

---Advertisement---

ಸುದ್ದಿಒನ್, ಹಿರಿಯೂರು, ಜನವರಿ. 03 : ನಗರದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮುಂದಿನ ಎರಡು ತಿಂಗಳೊಳಗೆ ಮುಗಿಸಲಾಗುವುದು. ಇದಕ್ಕೆ ನಗರಸಭೆಯ ಎಲ್ಲಾ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ತಿಳಿಸಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕೌನ್ಸಿಲ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಾಹಿತಿ ನೀಡಿದರು.

50-60 ವರ್ಷಗಳ ಹಿಂದೆ ಹಿರಿಯೂರು ನಗರ ಕಿರಿದಾಗಿತ್ತು. ದಿನ ಕಳೆದಂತೆ ನಗರ ವೇಗವಾಗಿ ಬೆಳೆಯುತ್ತಿದೆ. ಅಲ್ಲದೆ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಚಿಕ್ಕ ರಸ್ತೆಯ ಅಗಲೀಕರಣ ಅನಿವಾರ್ಯವಾಗಿದೆ. ಹಾಗಾಗಿ ರಸ್ತೆ ಅಗಲೀಕರಣ ಮಾಡಿಯೇ ತೀರುತ್ತೇವೆ ಎಂದರು.

ಕಂದಾಯ ವಸೂಲಿ ಹಾಗೂ ರಸ್ತೆ ಅಗಲೀಕರಣ ವಿಷಯದಲ್ಲಿ ನನಗೆ ವಿವಿಧ ರೀತಿಯ ಆಸೆ ಆಮಿಷಗಳನ್ನು ತೋರಿಸಿದರು. ಆದರೆ ನಾನು ಇಂತಹ ಆಮಿಷಗಳಿಗೆ ಬಲಿಯಾಗದೆ ಗಟ್ಟಿ ನಿರ್ಧಾರ ಕೈಗೊಂಡು ನಗರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ಮಧ್ಯ ರಸ್ತೆಯಿಂದ 21 ಮೀಟರ್ ಒಳಗಡೆ ಇರುವ ಕಟ್ಟಡಗಳ ಮಾಲೀಕರಿಗೆ ಯಾವುದೇ ರೀತಿಯ ಪರಿಹಾರ ನೀಡಲು ಬರುವುದಿಲ್ಲ.ಇದಕ್ಕೆ ನಮ್ಮಲ್ಲಿ ಸೂಕ್ತ ದಾಖಲೆ ಇವೆ. ಈಗಾಗಲೇ ಕೆಲವು ಕಟ್ಟಡ ಮಾಲೀಕರು ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ನಗರಸಭೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಿ ಕಾನೂನಿನ ಪ್ರಕಾರ ಕೆಡವಲು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ. ಕಾನೂನಿನ ಪ್ರಕಾರದಂತೆ ಕಾಮಗಾರಿ ಮಾಡಲಾಗುವುದು, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ, ರಸ್ತೆ ವಿಚಾರದಲ್ಲಿ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಅಕ್ರಮವಾಗಿ ಕಟ್ಟಿರುವ ಕಟ್ಟಡಗಳಿಗೆ ಯಾವುದೇ ರೀತಿಯ ವಿದ್ಯುತ್, ನೀರು ಕೊಡಬಾರದು ಎಂದು ಕೋರ್ಟ್ ಆದೇಶ ನೀಡಿದೆ. ನಗರಸಭೆ ಜಾಗದಲ್ಲಿ ಇಷ್ಟು ವರ್ಷ ಕಟ್ಟಡಗಳನ್ನು ಕಟ್ಟಿಕೊಂಡು ದುಡಿದು ಕೊಂಡಿದ್ದಾರೆ. ಹಾಗಾಗಿ ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರವೇ ನಡೆಯಲಿದೆ ಎಂದರು.

ಸದಸ್ಯ ಬಿ.ಎನ್.ಪ್ರಕಾಶ್ ಮಾತನಾಡಿ ಕೃಷ್ಣಂಬುದಿ ಕೆರೆ ಸಮೀಪ ಸರ್ಕಾರಿ ಜಾಗ ಸುಮಾರು 16 ಎಕರೆಯಷ್ಟು ಉಳಿದಿದ್ದು ಆ ಜಾಗವನ್ನು ಗುರುತಿಸುವ ಕಾರ್ಯವಾಗಬೇಕು ಎಂದರು.

ಸದಸ್ಯ ಜಿ.ಎಸ್.ತಿಪ್ಪೇಸ್ವಾಮಿ ಮಾತನಾಡಿ ನಗರಸಭೆ ಉಳಿತಾಯ ಮೊತ್ತದಲ್ಲಿ ತಯಾರಿಸಿದ ಕ್ರಿಯಾಯೋಜನೆ ಅನುಮೋದನೆಗೆ ಕಳಿಸಿದ್ದು ಏನಾಗಿದೆ ಎಂಬುದರ ಬಗ್ಗೆ ಸಂಬoಧಪಟ್ಟ ಇಂಜಿನಿಯರ್ ಉತ್ತರಿಸಬೇಕು. ಅಲ್ಲದೇ ಉಳಿತಾಯ ಬಜೆಟ್‌ನಲ್ಲಿ ರ
5 ಲಕ್ಷ ರೂ ಕಾಮಗಾರಿಗೆ ತುರ್ತು ಟೆಂಡರ್ ಕೋಟ್ ಮಾಡಿರುವ ಬಗ್ಗೆ ಸ್ಪಷ್ಟ ಮಾಹಿತಿ ಕೊಡಬೇಕು ಎಂದು ಒತ್ತಾಯಿಸಿದರು. ಅವರಿಗೆ ಪ್ರತಿಕ್ರಿಯಿಸಿದ ಎಇಇ ರಾಜು ಈ ಕ್ರಿಯಾ ಯೋಜನೆ ಅನುಮೋದನೆ ಆಗಿಲ್ಲ. ವಿಭಾಗವಾರು ಮರು ಪರೀಶೀಲನೆ ಮಾಡಲು ಯೋಜನಾ ನಿರ್ದೇಶಕರು ತಿಳಿಸಿದ್ದಾರೆ ಎಂದರು.
ಎಇಇ ಯವರ ಉತ್ತರಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಅಜಯ್ ಕುಮಾರ್ ಅಧಿಕಾರಿಗಳು ಬೇಜವ್ದಾರಿತನದಿಂದ ವರ್ತಿಸುತ್ತಾರೆ. ಈ ಬಗ್ಗೆ ಆಕೌಂಟ್ ಹಾಗೂ ಇಂಜಿನಿಯರ್ ವಿಭಾಗದ ತಪ್ಪಿದೆ. ನೀವು ಕಾಟಾಚಾರದ ಕೆಲಸ ಮಾಡುವುದಾದರೆ ಬೇರೆಡೆ ವರ್ಗಾವಣೆ ಪಡೆಯಿರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಂದಾಯ ಬಾಕಿ: ನಗರಸಭೆ ವ್ಯಾಪ್ತಿಯಲ್ಲಿ 100 ಬೃಹತ್ ಕಟ್ಟಡಗಳನ್ನು ಗುರುತಿಸಿದ್ದು ಆಸ್ಪತ್ರೆ, ಶಾಲೆಗಳು, ವಾಣಿಜ್ಯ ಮಳಿಗೆ, ಲಾಡ್ಜ್, ಹೋಟೆಲ್, ಚಿತ್ರಮಂದಿರ, ಛತ್ರಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಸುಮಾರು 26 ಬಿಲ್ಡಿಂಗ್ ಗಳಿಂದ ಒಟ್ಟು 998.84 ಲಕ್ಷ ನಗರಸಭೆಗೆ ಕಂದಾಯ ಬಾಕಿ ಬರಬೇಕಿದೆ.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಪೌರಾಯುಕ್ತ ಎ.ವಾಸಿಂ, ಸದಸ್ಯರಾದ ಎಂಡಿ. ಸಣ್ಣಪ್ಪ, ಈ. ಮಂಜುನಾಥ್, ಶಿವರಂಜನಿ ಯಾದವ್, ಚಿತ್ರಜಿತ್ ಯಾದವ್, ಬಾಲಕೃಷ್ಣ, ಗುಂಡೇಶ್ ಕುಮಾರ್, ಈರಲಿಂಗೇಗೌಡ, ರತ್ನಮ್ಮ, ಶಿವಕುಮಾರ್, ಗಿರೀಶ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...