Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನಿಗಳಿಗೆ ಮತ್ತೆ ಬೇಸರ ಮಾಡಿದ ರಾಕಿಂಗ್ ಸ್ಟಾರ್ ಯಶ್..!

Facebook
Twitter
Telegram
WhatsApp

ಕಳೆದ ಮೂರು ವರ್ಷಗಳಿಂದ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಂಡಿಲ್ಲ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಈ ವರ್ಷವಾದರೂ ಅದ್ದೂರಿಯಾಗಿ ಆಚರಿಸಬೇಕೆಂಬುದು ಫ್ಯಾನ್ಸ್ ಆಸೆಯಾಗಿತ್ತು. ಅದರಂತೆ ಖುಷಿಯಿಂದ ಕಾಯುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಯಶ್, ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಜನವರಿ 8.. ಸೋಮವಾರ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. 39ನೇ ವರ್ಷಕ್ಕೆ ರಾಕಿ ಬಾಯ್ ಕಾಲಿಡುತ್ತಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಾರೆ ಎಂದೇ ನಂಬಲಾಗಿತ್ತು. ಆದರೆ ಈಗ ಆ ನಿರೀಕ್ಷೆ ಸುಳ್ಳಾಗಿದೆ. ಅಭಿಮಾನಿಗಳನ್ನೆಲ್ಲಾ ಉದ್ದೇಶಿಸಿ, ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಜನವರಿ 8. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ, ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ.

ನಿಮ್ಮ ಪ್ರೀತಿಯ ಯಶ್ ಎಂದು ಬರೆದುಕೊಂಡಿದ್ದಾರೆ.ಇನ್ನು ಅಭಿಮಾನಿಗಳು ಯಶ್ ಅವರ ಸಿನಿಮಾಗಾಗಿ ಬಹಳ ಕಾತುರದಿಂದ ಕಾಯುತ್ತಿದ್ದರು. ಅದರಂತೆ ‘ಟಾಕ್ಸಿಕ್’ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾದ ಮೇಲೂ ಬಾರೀ ನಿರೀಕ್ಷೆ ಮೂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!