ಪಿಯು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಕ್ಕೆ..!

suddionenews
1 Min Read

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರೋಹಿತ್ ಚಕ್ರತೀರ್ಥ ವಿಚಾರದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅವರನ್ನು ಸಾಕಷ್ಟು ಜನ ವಿರೋಧಿಸಿದ್ದಾರೆ. ಈ ಬೆನ್ನಲ್ಲೆ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣಾ ಸಮಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಸರ್ಕಾರ ಕೈ ಬಿಟ್ಟಿದೆ.

ಪಠ್ಯ ಒರಿಷ್ಕರಣೆಗ ಈ ಮೊದಲು ರೋಹಿತ್ ಚಕ್ರತೀರ್ಥ ಅವರನ್ನು ಸರ್ಕಾರವೇ ನೇಮಿಸಿತ್ತು. ಆದರೆ ಸಾಲು ಸಾಲು ವಿವಾದಗಳು ಹುಟ್ಟಿಕೊಂಡ ಬೆನ್ನಲ್ಲೇ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿರುವ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ಅಧ್ಯಾಯ 4.2ರ ಹಿಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆಗೆ ಈ ಮೊದಲು ಸರ್ಕಾರ ಮುಂದಾಗಿತ್ತು. ಅದರಂತೆ ಪಠ್ಯ ಪರಿಷ್ಕರಣೆ ಜವಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಕೆಲವು ವಿವಾದದ ಹಿನ್ನೆಲೆ ಚಕ್ರತೀರ್ಥ ಸಮಿತಿಯನ್ನು ಕೈ ಬಿಡಲಾಗಿದೆ ಎಂದು ಸ್ಒಷ್ಟನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *