ರೋಹಿತ್ ಶತಕ : ಭಾರತಕ್ಕೆ ಭರ್ಜರಿ ಗೆಲುವು….!

ಸುದ್ದಿಒನ್ : ಭಾರತ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ತಂಡವು 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರ ಈ ಪಂದ್ಯ ನಡೆಯಿತು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ ಕೊಂಡ ಇಂಗ್ಲೆಂಡ್ ತಂಡವು 49.5 ಓವರ್‌ಗಳಲ್ಲಿ 304 ರನ್‌ಗಳಿಗೆ ಆಲೌಟ್ ಆಯಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ 44.3 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.

ಭಾರತದ ನಾಯಕ ರೋಹಿತ್ ಶರ್ಮಾ 119 ರನ್ ಗಳಿಸಿ ತಮ್ಮ 32 ನೇ ಏಕದಿನ ಶತಕವನ್ನು ಗಳಿಸಿದರು. ಶುಭಮನ್ ಗಿಲ್ 60 ರನ್ ಗಳಿಸಿದರು. ರವೀಂದ್ರ ಜಡೇಜಾ 3 ವಿಕೆಟ್ ಪಡೆದರು. ಇಂಗ್ಲೆಂಡ್ ಪರ ಜೋ ರೂಟ್ 69 ಮತ್ತು ಬೆನ್ ಡಕೆಟ್ 65 ರನ್ ಗಳಿಸಿದರು. ಜೇಮೀ ಓವರ್ಟನ್ 2 ವಿಕೆಟ್ ಪಡೆದರು. ಮೂರನೇ ಏಕದಿನ ಪಂದ್ಯ ಫೆಬ್ರವರಿ 12 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

suddionenews

Recent Posts

ಸರ್ಕಾರಿ ಆಸ್ಪತ್ರೆ ವೈದ್ಯರ ಹಾದಿರಂಪ- ಬೀದಿರಂಪ : ವೀಡಿಯೋ ವೈರಲ್

ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ.‌ ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ…

29 seconds ago

ಯತ್ನಾಳ್ ಗೆ ಶಾಕ್ ನೀಡಿದ ಹೈಕಮಾಂಡ್ : ಏನದು..?

ಬೆಂಗಳೂರು: ಮೊದಲಿನಿಂದಾನೂ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇದ್ದಾರೆ. ಇದರ ಮಧ್ಯೆ ಯಡಿಯೂರಪ್ಪ ಅವರಿಗೆ…

27 minutes ago

ಫೆಬ್ರವರಿ 12ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ ಪಕ್ಕದಲ್ಲಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಇದೇ…

30 minutes ago

ಚಿತ್ರದುರ್ಗದಲ್ಲಿ ಖೋ-ಖೋ ಸಂಸ್ಥೆ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

35 minutes ago

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಮೋಸ : ಅರ್ಜುನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

50 minutes ago

ನ್ಯಾಯವಾದಿ ಅಹೋಬಲನಾಯಕ ನಿಧನ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 10 : ನ್ಯಾಯವಾದಿ ಸಿ.ವಿ.ಅಹೋಬಲನಾಯಕ(76) ಭಾನುವಾರ ಸಂಜೆ ಕೆ.ಎಸ್.ಆರ್.ಟಿ.ಸಿ. ಡಿಪೋ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.…

52 minutes ago