Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಟರಿ ಕ್ಲಬ್ ಚಿನ್ಮೂಲಾದ್ರಿ ನಿಸ್ವಾರ್ಥವಾಗಿ ಸಮಾಜದ ಸೇವೆ ಮಾಡುತ್ತಿದೆ : ಮಾಣಿಕ್ಯ ಪವಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 20 :
ರೋಟರಿ ಕ್ಲಬ್ ಚಿನ್ಮೂಲಾದ್ರಿ ಇದೊಂದು ಸೇವಾ ಮನೋಭವನೆಯ ಸಂಘಟನೆಯಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜನಸೇವೆಯನ್ನು ಮಾಡಬೇಕಿದೆ ಎಂದು ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಜಿಲ್ಲಾ ಗವರ್ನರ್ ಮಾಣಿಕ್ಯ ಪವಾರ್ ಕ್ಲಬ್‍ನ ಪದಾಧಿಕಾರಿಗಳಿಗೆ ಕರೆ ನೀಡಿದರು.

ನಗರದ ಎಸ್.ಬಿ.ಆರ್.ಎಂ ರೋಟರಿ ಬಾಲಭವನದಲ್ಲಿ ಭಾನುವಾರ ಸಂಜೆ ರೋಟರಿ ಕ್ಲಬ್ ಚಿನ್ಮೂಲಾದ್ರಿಗೆ ಭೇಟಿ ನೀಡಿದ್ದ ಜಿಲ್ಲಾ ಗೌರ್ನರ್ ರವರ ಸಂಬಂಧ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಲಬ್ ಜನೋಪಯೋಗಿಯಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ. ಜನರಿಗೆ ಅಗತ್ಯವಾದ ಆರೋಗ್ಯ ತಪಾಸಣಾ ಶಿಬಿರ, ಶಿಕ್ಷಣದ ಬಗ್ಗೆ ಮಾಹಿತಿ, ರಕ್ತದಾನ ಶಿಬಿರ, ಸೇರಿದಂತೆ ಕ್ಲಬ್‍ನಿಂದ ದೂರೆಯಬಹುದಾದ ಇತರೆ ಮಾಹಿತಿಯನ್ನು ನೀಡುವುದರ ಮೂಲಕ ಅವರನ್ನು ಕ್ಲಬ್‍ನ ಸದಸ್ಯರನ್ನಾಗಿ ಮಾಡಬೇಕಿದೆ. ಇದರಿಂದಾಗಿ ನಾಯಕತ್ವ ಬೆಳೆಯುತ್ತದೆ ಎಂದರು.

ಕ್ಲಬ್‍ವತಿಯಿಂದ ಮಾಡಿದಂತಹ ಕಾರ್ಯಕ್ರಮಗಳ ಮಾಹಿತಿಯನ್ನು ಕ್ಲಬ್‍ನ ಕೇಂದ್ರ ಕಛೇರಿಗೆ ಕಳುಹಿಸುವುದನ್ನು ಮರೆಯಬಾರದು. ರೋಟರಿ ಕ್ಲಬ್ ಚಿನ್ಮೂಲಾದ್ರಿ ಏನು ಮಾಡುತ್ತಿದೆ ಎಂಬುದನ್ನು ಜನತೆ ತಿಳಿಯಬೇಕಿದೆ ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ಮತ್ತು ಸಹಾಯವನ್ನು ಕ್ಲಬ್‍ನವರು ಮಾಡಬೇಕಿದೆ ಇಂದಿನ ಸಮಾಜಿಕ ಜಾಲ ತಾಣಗಳನ್ನು ಉಪಯೋಗ ಮಾಡಿಕೊಂಡು ಪ್ರಚಾರ ಮಾಡಬೇಕಿದೆ ಎಂದ ಅವರು, ಈ ಸಂಸ್ಥೆ ನಿಸ್ವಾರ್ಥವಾಗಿ ಸಮಾಜದ ವಿವಿಧ ರೀತಿಯ ಕೆಲಸವನ್ನು ಮಾಡುತ್ತಿದೆ. ಬಡವರಿಎಗ ತಮ್ಮ ಕೈಲಾದ ಸಹಾಯವನ್ನು ಸಹಾ ಮಾಡಬೇಕಿದೆ ಎಂದು ಮಾಣಿಕ್ಯ ಪವಾರ್ ಕರೆ ನೀಡಿದರು.

ಅಸಿಸ್ಟೆಂಟ್ ಗೌರ್ನರ್ ಆದ ಉಮೇಶ್ ತುಪ್ಪದ್ ಮಾತನಾಡಿ, ಕ್ಲಬ್ ಗಳಿಗೆ ಜಿಲ್ಲಾ ಗೌರ್ನರ್ ಬೇಟಿ ಮಾಡುವುದು ಅಲ್ಲಿನ ಕಾಗದ ಪತ್ರ ಮತ್ತು ಮಾಡಿದಂತಹ ಕಾರ್ಯಕ್ರಮಗಳ ವರದಿಯನ್ನು ನೋಡುವುದು ಸಾಮಾನ್ಯವಾದ ಕೆಲಸವಾಗಿದೆ. ಈ ಹಿನ್ನಲೆಯಲ್ಲಿ ಕ್ಲಬ್‍ನ ಪದಾಧಿಕಾರಿಗಳು ತಾವು ಮಾಡಿದ ಕೆಲಸದ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಸಂಗ್ರಹ ಮಾಡಿಕೊಂಡಿರಬೇಕು. ಈ ವಿಷಯದ ಬಗ್ಗೆ ಚರ್ಚೆಯಾಗಬೇಕಿದೆ.

ಆರೋಗ್ಯ ಶಿಕ್ಷಣ ಸಮಾಜಿಕ ಕಳಕಳಿಯ ಬಗ್ಗೆ ಹೆಚ್ಚಿನ ಒತ್ತನ್ನು ನೀಡಬೇಕಿದೆ. ಕಾರ್ಯಕ್ರಮ ಮಾಡುವುದು ಒಂದು ಕೆಲಸವಾದರೆ ಅವುಗಳನ್ನು ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷರಾದ ಶಂಕರಪ್ಪ ಕಾರ್ಯದರ್ಶಿ ಲಕ್ಷ್ಮೀಕಾಂತ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬಬ್ಬೂರಿನಲ್ಲಿ ಸರಣಿ ಕಳ್ಳತನ

ಸುದ್ದಿಒನ್, ಹಿರಿಯೂರು, ಡಿಸೆಂಬರ್.11 : ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಗ್ರಾಮದ ಮೂರು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಗ್ರಾಮದ  ಅಭಿನಂದನ್, ಶ್ರೀರಂಗ ಬೇಕರಿ ಪುನೀತ್, ಹನುಮಂತಪ್ಪ ಅವರಿಗೆ

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  370 ನೇ ವಿಧಿ ಕುರಿತು SC ತೀರ್ಪು : 370 ನೇ ವಿಧಿಯನ್ನು ರದ್ದುಗೊಳಿಸುವುದು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

370 ನೇ ವಿಧಿ : ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು :  ಕಾಶ್ಮೀರದಲ್ಲಿ ಬಿಗಿ ಭದ್ರತೆ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ 4 ವರ್ಷಗಳು ಕಳೆದಿವೆ. ಆದರೆ, 370ನೇ ವಿಧಿ ರದ್ದತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

error: Content is protected !!