Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಟರಿ ಕ್ಲಬ್ ಇರುವುದು ಜನರ ಅನುಕೂಲಕ್ಕಾಗಿ :  ಹನುಮಲಿ ಷಣ್ಮುಖಪ್ಪ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.05) : ರೋಟರಿ ಕ್ಲಬ್ ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಇರುವುದು ಜನರ ಅನುಕೂಲಕ್ಕಾಗಿ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ, ಜಾಗೃತಿ ನೀಡುವ ನಿಟ್ಟಿನಲ್ಲಿ ಅವರ ಸೇವೆ ಶ್ಲಾಘನೀಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹನುಮಲಿ ಷಣ್ಮುಖಪ್ಪ ತಿಳಿಸಿದರು.

ನಗರದ ಮೆದೇಹಳ್ಳಿ ರಸ್ತೆಯ ಶ್ರೀ ತರಳಬಾಳು ಶಿವಾಚಾರ್ಯ ಬಡಾವಣೆಯಲ್ಲಿ ಮಂಗಳವಾರ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ನಿಂದ ಆಯೋಜಿಸಿದ್ದ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಭೆಯಲ್ಲಿ ಮಾತನಾಡಿದರು.

ರೋಟರಿ ಸಹ ಕೋವಿಡ್ ಸಂಕಷ್ಟದಲ್ಲಿ ಸಾಕಷ್ಟು ಕೆಲಸ ಮಾಡಿದೆ. ರೋಟರಿ ಸಾಮಾಜಿಕ ಸೇವೆಯನ್ನು ಉಸಿರಾಗಿಸಿಕೊಂಡಿದ್ದಾರೆ. ಕೋವಿಡ್ ಮೂರನೇ ಅಲೆ ಸಂಭಾವ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳುತ್ತಿದ್ದಾರೆ. ಇಂತಹ ಸಮಯದಲ್ಲಿ ರೋಟರಿ ಅಧ್ಯಕ್ಷರಾದ ಶಿವಕುಮಾರ್ ಹಾಗೂ ಜೋಷಿ ಅವರು ವೈಜ್ಞಾನಿಕವಾಗಿ ಧೃಡಿಕರಿಸಿದ ಆಂಧ್ರಪ್ರದೇಶದ ಆನಂದಯ್ಯ ಅವರ ಕರೋನ  ಆರ್ಯವೇದ ಔಷಧಿಯನ್ನು ನೀಡಿದ್ದಾರೆ. ಕೋವಿಡ್ ಬಂದರೆ ಅದನ್ನು ತಡೆಯುವ ಶಕ್ತಿ ಈ ಔಷಧಕ್ಕಿದೆ. ಎರಡು ಬಾರಿ ತೆಗೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಮತ್ತು ಕೋವಿಡ್ ನಿಯಂತ್ರಣ ಮಾಡುವಲ್ಲಿ ಸರ್ಕಾರಗಳು ಯಶಸ್ವಿಯಾಗಿವೆ ಎಂದರು.

ಈ ಬಡಾವಣೆ ಆಗಿ ಹತ್ತು ವರ್ಷವಾಗಿದೆ. ಆದರೆ ನಿರ್ವಹಣೆಯ ತೊಂದರೆಯಿದೆ. ಒಂದು ಸಮಿತಿ ಮಾಡಿ ಅದರ ನಿರ್ವಹಣೆ ಜವಬ್ದಾರಿ ನೀಡಲಾಗುತ್ತದೆ. ಅದಕ್ಕೊಬ್ಬ ಸಾರಥಿಯನ್ನು ನೇಮಕ ಮಾಡಬೇಕು. ಮನೆ ಕಟ್ಟಿದವರಿ ಗೆ, ಸೈಟ್ ಇದ್ದವರಿಗೂ ಅದರ ಶುಲ್ಕ ವಿಧಿಸಲಾಗುತ್ತದೆ. ಜನರಿಂದ ಜನರಿಗಾಗಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿಯೇ ಮುಖ್ಯ‌. ಗ್ರಂಥಾಲಯ, ಕಚೇರಿ, ವಾಯು ವಿಹಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಡಾವಣೆಯ ನಿವಾಸಿಗಳ ಅಭಿಪ್ರಾಯದಂತೆ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಸರ್ವ ಸದಸ್ಯರ ಸಮಿತಿಯನ್ನು ರಚಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷರಾದ ಸಿ.ಎಸ್. ಶಿವಕುಮಾರ್, ಕಾರ್ಯದರ್ಶಿ ಪ್ರತೀಕ್ ಜೋಷಿ, ಮಹಡಿ ಶಿವಮೂರ್ತಿ ಸೇರಿದಂತೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!