ಸುದ್ದಿಒನ್, ಚಿತ್ರದುರ್ಗ, (ಅ.05) : ರೋಟರಿ ಕ್ಲಬ್ ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಇರುವುದು ಜನರ ಅನುಕೂಲಕ್ಕಾಗಿ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ, ಜಾಗೃತಿ ನೀಡುವ ನಿಟ್ಟಿನಲ್ಲಿ ಅವರ ಸೇವೆ ಶ್ಲಾಘನೀಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹನುಮಲಿ ಷಣ್ಮುಖಪ್ಪ ತಿಳಿಸಿದರು.
ನಗರದ ಮೆದೇಹಳ್ಳಿ ರಸ್ತೆಯ ಶ್ರೀ ತರಳಬಾಳು ಶಿವಾಚಾರ್ಯ ಬಡಾವಣೆಯಲ್ಲಿ ಮಂಗಳವಾರ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ನಿಂದ ಆಯೋಜಿಸಿದ್ದ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಭೆಯಲ್ಲಿ ಮಾತನಾಡಿದರು.
ರೋಟರಿ ಸಹ ಕೋವಿಡ್ ಸಂಕಷ್ಟದಲ್ಲಿ ಸಾಕಷ್ಟು ಕೆಲಸ ಮಾಡಿದೆ. ರೋಟರಿ ಸಾಮಾಜಿಕ ಸೇವೆಯನ್ನು ಉಸಿರಾಗಿಸಿಕೊಂಡಿದ್ದಾರೆ. ಕೋವಿಡ್ ಮೂರನೇ ಅಲೆ ಸಂಭಾವ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳುತ್ತಿದ್ದಾರೆ. ಇಂತಹ ಸಮಯದಲ್ಲಿ ರೋಟರಿ ಅಧ್ಯಕ್ಷರಾದ ಶಿವಕುಮಾರ್ ಹಾಗೂ ಜೋಷಿ ಅವರು ವೈಜ್ಞಾನಿಕವಾಗಿ ಧೃಡಿಕರಿಸಿದ ಆಂಧ್ರಪ್ರದೇಶದ ಆನಂದಯ್ಯ ಅವರ ಕರೋನ ಆರ್ಯವೇದ ಔಷಧಿಯನ್ನು ನೀಡಿದ್ದಾರೆ. ಕೋವಿಡ್ ಬಂದರೆ ಅದನ್ನು ತಡೆಯುವ ಶಕ್ತಿ ಈ ಔಷಧಕ್ಕಿದೆ. ಎರಡು ಬಾರಿ ತೆಗೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಮತ್ತು ಕೋವಿಡ್ ನಿಯಂತ್ರಣ ಮಾಡುವಲ್ಲಿ ಸರ್ಕಾರಗಳು ಯಶಸ್ವಿಯಾಗಿವೆ ಎಂದರು.
ಈ ಬಡಾವಣೆ ಆಗಿ ಹತ್ತು ವರ್ಷವಾಗಿದೆ. ಆದರೆ ನಿರ್ವಹಣೆಯ ತೊಂದರೆಯಿದೆ. ಒಂದು ಸಮಿತಿ ಮಾಡಿ ಅದರ ನಿರ್ವಹಣೆ ಜವಬ್ದಾರಿ ನೀಡಲಾಗುತ್ತದೆ. ಅದಕ್ಕೊಬ್ಬ ಸಾರಥಿಯನ್ನು ನೇಮಕ ಮಾಡಬೇಕು. ಮನೆ ಕಟ್ಟಿದವರಿ ಗೆ, ಸೈಟ್ ಇದ್ದವರಿಗೂ ಅದರ ಶುಲ್ಕ ವಿಧಿಸಲಾಗುತ್ತದೆ. ಜನರಿಂದ ಜನರಿಗಾಗಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿಯೇ ಮುಖ್ಯ. ಗ್ರಂಥಾಲಯ, ಕಚೇರಿ, ವಾಯು ವಿಹಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಡಾವಣೆಯ ನಿವಾಸಿಗಳ ಅಭಿಪ್ರಾಯದಂತೆ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಸರ್ವ ಸದಸ್ಯರ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷರಾದ ಸಿ.ಎಸ್. ಶಿವಕುಮಾರ್, ಕಾರ್ಯದರ್ಶಿ ಪ್ರತೀಕ್ ಜೋಷಿ, ಮಹಡಿ ಶಿವಮೂರ್ತಿ ಸೇರಿದಂತೆ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…