ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಹಲಸೂರಿನ ಬಳಿ ನಡೆದ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಲಸೂರು ಕೆರೆ ಬಳಿಯ ವಾರ್ ಮೆಮೋರಿಯಲ್ ಸರ್ಕಲ್ ನಲ್ಲಿ ರೌಡಿಶೀಟರ್ ಹತ್ಯೆ ಮಾಡಲಾಗಿದೆ. ಬಿಕ್ಲು ಶಿವನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಭಾರತೀನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವನನ್ನ ಅವನ ಮನೆಯ ಮುಂದೆಯೇ ಕೊ* ಮಾಡಿದ್ದಾರೆ. ನಾಲ್ಕೈದು ಜನಗಳು ಬಂದು ಬರ್ಬರವಾಗಿ ಕೊಂದಿದ್ದಾರೆ. ರೌಡಿಶೀಟರ್ ಬಿಕ್ಲ ಶಿವನ ಕೊಲೆ ಮಾಡುವುದಕ್ಕೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಮೇಲ್ನೋಟಕ್ಕೆ ಹಳೇ ವೈಷಮ್ಯದಿಂದ ಹಿನ್ನೆಲೆ ಕೊ* ಮಾಡಲಾಗಿದೆ ಎನ್ನಲಾಗ್ತಾ ಇದೆ. ನಿನ್ನೆ ರತ್ರಿ 8.30ರ ಸುಮಾರಿಗೆ ಈ ಕೊಲೆ ನಡೆದಿದೆ. ಮಗನ ಜೀವ ತೆಗೆಯುವುದಕ್ಕೆ ಶಾಸಕ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ. ಹೀಗಾಗಿ ಮಗನ ಕೊಲೆ ಮಾಡಲಾಗಿದೆ ಅಂತ ರೌಡಿಶೀಟರ್ ಶಿವನ ತಾಯಿ ಆರೋಪ ಮಾಡಿದ್ದಾತೆ. ಈ ದೂರಿನ ಆಧಾರದ ಮೇಲೆ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಾಖಲಾದ ಎಫ್ಐಆರ್ ನಲ್ಲಿ ಶಾಸಕ ಭೈರತಿ ಬಸವರಾಜ್ ಅವರನ್ನು ಎ5 ಆರೋಪಿ ಎಂದು ಉಲ್ಲೇಖ ಮಾಡಲಾಗಿದೆ. ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಜಗದೀಶ್, ವಿಮಲ್, ಕಿರಣ್, ಅನಿಲ್ ಹಾಗೂ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ಕೂಡ ತನಿಖೆಯನ್ನ ನಡೆಸುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್