Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜವಗೊಂಡನಹಳ್ಳಿ ಚೆಕ್‌ ಪೋಸ್ಟ್ ನಲ್ಲಿ ರೂ.1.44 ಕೋಟಿ ಜಪ್ತಿ : ದಾಖಲೆಗಳ ಪರಿಶೀಲನೆ

---Advertisement---

 

ಚಿತ್ರದುರ್ಗ, ಮಾರ್ಚ್. 23 :  ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ (ಜವನಗೊಂಡನಹಳ್ಳಿ) ಗಡಿ ಬಳಿ ಪರಿಶೀಲನೆ ನಡೆಸುವ ವೇಳೆ ಅನಧಿಕೃತವಾಗಿ ರೂ.1.44 ಕೋಟಿ ಸಾಗಟ ಮಾಡುತ್ತಿದ್ದ ಸಿಎಂಎಸ್ ಕಂಪನಿಯ ವಾಹನ ದೊರಕಿದೆ. ಹಿರಿಯೂರು ತಹಶೀಲ್ದಾರ್ ರಾಜೇಶ್, ಹಿರಿಯೂರು ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಸಂಚಾರಿ ಜಾರಿ ದಳದ ಅಧಿಕಾರಿಗಳು ಹಣ ಜಪ್ತಿಮಾಡಿ ವಾಹನ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಪ್ರಗತಿಯಲ್ಲಿದೆ.

ಎಟಿಎಂ‌ಗಳ ಹಣ ನಿರ್ವಹಣೆ ಮಾಡವ ಸಿಎಂಎಸ್ ಕಂಪನಿಯ ತುಮಕೂರಿನಿಂದ ಶಿರಾ ತಾಲ್ಲೂಕಿನವರೆಗೆ ಮಾತ್ರ ಎಟಿಎಂಗಳಿಗೆ ಹಣ ತುಂಬಲು ಅನುಮತಿ ಪಡೆದಿತ್ತು. ಆದರೆ ಶಿರಾ ತಾಲ್ಲೂಕು ಹೊರತು ಪಡಿಸಿ ಹಿರಿಯೂರು ತಾಲ್ಲೂಕು ಗಡಿ ಪ್ರವೇಶಿಸಿದೆ.  ಈ ಕುರಿತು ವಿಚಾರಿಸಿದಾಗ  ಹಿರಿಯೂರು ಗಡಿ ಪ್ರವೇಶಿಸಿದ್ದಕ್ಕೆ ಯಾವುದೇ ಸೂಕ್ತ ದಾಖಲೆ ಪ್ರಸ್ತುತ ಪಡಿಸಿರುವುದಿಲ್ಲ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ  ಚಿತ್ರದುರ್ಗ ಜಿಲ್ಲೆಯ ಎಟಿಎಂಗಳಿಗೆ ಹಣ ತುಂಬಲು ಚಿತ್ರದುರ್ಗ ಜಿಲ್ಲಾಧಿಕಾರಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದ್ದರಿಂದ ರೂ.1.44 ಕೋಟಿ ಹಣ ಹಾಗೂ ವಾಹನ ಜಪ್ತಿ ಮಾಡಿ ವಶಪಡಿಸಿಕೊಂಡಿದ್ದಾಗಿ ತಹಶೀಲ್ದಾರ್ ರಾಜೇಶ್ ತಿಳಿಸಿದ್ದಾರೆ.

ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ವಶ ಪಡಿಸಿಕೊಂಡ ಹಣವನ್ನು ಸೂಕ್ತ ವಿಚಾರಣೆಯ ಬಳಿಕೆ ಜಿ.ಪಂ.ಸಿಇಓ ನೇತೃತ್ವದಲ್ಲಿ ನಗದು ಜಪ್ತಿ ಸಮಿತಿ ವಶಕ್ಕೆ ನೀಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...