Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ರೂ.1 ಲಕ್ಷ ಬಹುಮಾನ: DHO ಡಾ.ಜಿ.ಪಿ.ರೇಣುಪ್ರಸಾದ್

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ.06 :ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ  ನಿಷೇಧ  ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗಪತ್ತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಭ್ರೂಣ ಲಿಂಗ ಪತ್ತೆ ಅಥವಾ ಹೆಣ್ಣು ಭ್ರೂಣ ಹತ್ಯೆ ಕೈಗೊಳ್ಳುವವರ ಬಗೆಗಿನ ಮಾಹಿತಿ ನೀಡುವವರಿಗೆ ರೂ.01 ಲಕ್ಷ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೆಣ್ಣು ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡಿ ಯಶಸ್ವಿಗೊಂಡ ಗುಪ್ತಕಾರ್ಯಾಚರಣೆಯ ಮಾಹಿತಿದಾರರಿಗೆ ಬಹುಮಾನವಾಗಿ ನೀಡಲಾಗುತ್ತಿದ್ದ ರೂ.50,000 ಮೊತ್ತವು ರೂ.01 ಲಕ್ಷಕ್ಕೆ ಏರಿಕೆಯಾಗಿದ್ದು, ಮಾಹಿತಿದಾರರ  ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಿಸಿಪಿಎನ್‍ಡಿಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ಎಂ.ಉಮೇಶ್, ಕೆ.ಪಿ.ಮೀನಾಕ್ಷಿ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...