ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ತುಮಕೂರು – ರಾಯದುರ್ಗ ನೂತನ ರೈಲುಮಾರ್ಗ ಈ ಭಾಗದ ಅತ್ಯಂತ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಭಾಗವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಾವಗಡದಿಂದ ಮಡಕಶಿರಾ ನಡುವಿನ 22 ಕಿ.ಮೀ ಉದ್ದದ ಹೊಸ ಬ್ರಾಡ್ಗೇಜ್ ರೈಲುಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರೂ.265.92 ಕೋಟಿ ಅನುದಾನ ಒದಗಿಸುವ ಮೂಲಕ ತುಮಕೂರು-ರಾಯದುರ್ಗ ಹೊಸ ಬ್ರಾಡ್ಗೇಜ್ ರೈಲು ಮಾರ್ಗಕ್ಕೆ ವೇಗ ನೀಡಿದೆ.
ಈಗಾಗಲೇ ಈ ಬಗ್ಗೆ ನೈರುತ್ಯ ರೈಲ್ವೆ ವಲಯದಿಂದ ಟೆಂಡರ್ ಕರೆಯಲಾಗಿದೆ, ದಿನಾಂಕ: 11.09.2024 ರಂದು ಈ ಕಾಮಗಾರಿಯ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ. ಒಟ್ಟಾರೆಯಾಗಿ ಈ ಯೋಜನೆಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.
ಈ ಯೋಜನೆಯಡಿ ಪಾವಗಡ ಮತ್ತು ಮಡಕಶಿರಾ ನಗರಗಳಲ್ಲಿ 510 ಚದುರ ಮೀಟರ್ ವಿಸ್ತೀರ್ಣದ ಸುಸಜ್ಜಿತ ರೈಲ್ವೆ ನಿಲ್ದಾಣಗಳು ನಿರ್ಮಾಣವಾಗಲಿವೆ, ಹಾಗೂ ಈ ಮಾರ್ಗದಲ್ಲಿ ತಡೆರಹಿತ ರೈಲು ಸಂಚಾರಕ್ಕೆ 3 ಪ್ರಮುಖ ಸೇತುವೆಗಳು, 32 ಸಣ್ಣ ಸೇತುವೆಗಳು, 21 RUB (Riad under bridge) ಗಳು ಹಾಗೂ 4 ROB (Road over bridge) ಗಳು ನಿರ್ಮಾಣವಾಗಲಿವೆ.
ಒಟ್ಟಾರೆಯಾಗಿ ಯಾವುದೇ ಅಡೆತಡೆಯಿಲ್ಲದೇ ರೈಲುಗಳು ಪ್ರತಿಗಂಟೆಗೆ 110 ಕಿ.ಮೀ ವೇಗದಲ್ಲಿ ಚಲಿಸಲು ಯಾವ ಅಗತ್ಯ ಮೂಲಸೌಕರ್ಯಗಳು ಬೇಕೋ ಆ ಎಲ್ಲವನ್ನೂ ಈ ಯೋಜನೆ ಒಳಗೊಂಡಿದೆ. ತುಮಕೂರು-ರಾಯದುರ್ಗ ನೂತನ ರೈಲು ಮಾರ್ಗ ಪೂರ್ಣಗೊಂಡರೆ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…