Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಬಾಯಲ್ಲಿ RSS ಗೀತೆ : ಕ್ಷಮೆಗೆ ಒತ್ತಾಯಿದ ಬಿಕೆ ಹರಿಪ್ರಸಾದ್

---Advertisement---

ಬೆಂಗಳೂರು : ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು RSS ಗೀತೆಯನ್ನ ಹಾಡಿದ್ದರು. ಇದಕ್ಕೆ ಹಲವು ವಿರೋಧಿಸಿದರೆ, ಇನ್ನು ಹಲವರು ಪ್ರೋತ್ಸಾಹಿಸಿದರು. ಅದರಲ್ಲೂ ಬಿಜೆಪಿಯವರು ಬೆಂಬಲವನ್ನ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ನ ಹಿರಿಯ ನಾಯ ಬಿಕೆ ಹರಿಪ್ರಸಾದ್ ಅವರು ಮಾತನಾಡಿ, ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಚಾರ ಸಂಬಂಧ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು, ಬಿಜೆಪಿ ಅವರು ಇಂಥ ವಿಚಾರಗಳನ್ನ ಸಮರ್ಥಿಸಿಕೊಳ್ಳಲೇಬೇಕು. ಯಾಕಂದ್ರೆ, ಈ ದೇಶದಲ್ಲಿ ಆರ್ ಎಸ್ ಎಸ್ ಈಗಾಗಲೇ ಮೂರು ಬಾರಿ ನಿಷೇಧ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಸಂಘಕ್ಕೆ ಪ್ರಾರ್ಥನೆ ಮಾಡುವುದರಲ್ಲಿ ತಪ್ಪೇನು ಇಲ್ಲ. ಆದರೆ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮಾಡುವುದು ತಪ್ಪು ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಆರ್ ಎಸ್ ಎಸ್ ಗೀತೆ ಹಾಡಬಾರದು. ಈ ವಿಚಾರಕ್ಕೆ ಅವರು ಕ್ಷಮೆ ಕೇಳಲೇಬೇಕು. ಯಾಕಂದ್ರೆ ಸರ್ಕಾರ ಎಂಬುದು ಒಂದು ಪಕ್ಷದ್ದಲ್ಲ. ಇಡೀ ಏಳು ಕೋಟಿ ಕರ್ನಾಟಕ ಜನತೆಯ ಸರ್ಕಾರ. ಅದರಲ್ಲಿ ಆರ್ ಎಸ್ ಎಸ್ ಅವರು ಇದ್ದಾರೆ. ಜಮಾಹತ್ ಇಸ್ಲಾಮಿ ಅವರೂ ಇದ್ದಾರೆ. ಎಲ್ಲರೂ ಇದ್ದಾರೆ. ತಾಲಿಬಾನಿಗಳು ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಆ ರೀತಿ ಹೇಳುವ ಹಾಗೆಯೇ ಇಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳಿದ್ದರೆ ಕ್ಷಮೆ ಕೇಳಬೇಕಾಗುತ್ತದೆ. ಯಾಕಂದ್ರೆ ಮಹಾತ್ಮ ಗಾಂಧಿಯವರನ್ನು ಕೊಂದಂತ ಸಂಘಟನೆ ಅದು. ಆ ಸಂಘಟನೆಯ ಪ್ರಾರ್ಥನೆ ಮಾಡುವುದು ಸರಿಯಲ್ಲ. ಯಾರನ್ನು ಮೆಚ್ಚಿಸುವುದಕ್ಕೆ ಈ ರೀತಿಯ ಪ್ರಾರ್ಥನೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment