ದಾವಣಗೆರೆಯಲ್ಲಿ ಕಾಂಗ್ರೆಸ್ ಸೇರಿದ RSS ಕಟ್ಟಾಳು ಟಿ ಗುರುಸಿದ್ದೇಗೌಡ

ದಾವಣಗೆರೆ: ಲೋಕಸಭಾ ಚುಬಾವಣೆಯ ಪ್ರಚಾರ ಜೋರಾಗಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವಿಚಾರವಾಗಿಯೇ ಅಸಮಾಧಾನ ಹೊಗೆಯಾಡುತ್ತಿದ‌ಎ. ಅದರಲ್ಲೂ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಸಂಸದ ಸಿದ್ದೇಶ್ವರದ ಬದಲಿಗೆ ಬಿಜೆಪಿ ಅವರ ಪತ್ನಿಗೆ ಟಿಕೆಟ್ ನೀಡಿದೆ. ಇದು ಬಿಜೆಪಿ ನಾಯಕರಲ್ಲೇ ಅಸಮಾಧಾನ ಉಂಟು ಮಾಡಿದೆ. ರೇಣುಕಾಚಾರ್ಯ ಕೋಪವಂತು ಇನ್ನು ತಣ್ಣಗಾಗುತ್ತಿಲ್ಲ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಂಧಾನ ಮಾಡುವುದಕ್ಕೆ ಪ್ರಯತ್ನ ಪಟ್ಟರು ಯಾವುದೆರ ರೀತಿಯ ಪ್ರಯೋಜನವಾಗಿಲ್ಲ. ಇದೀಗ ಆರ್ ಎಸ್ ಎಸ್ ನ ಕಟ್ಟಾಳು ಎನಿಸಿಕೊಂಡಿದ್ದಂತ, ಮಾಜಿ ಶಾಸಕ ಟಿ ಗುರುಸಿದ್ದನಗೌಡ, ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವುದು, ದಾವಣಗೆರೆ ಬಿಜೆಪಿಯಲ್ಲಿಯೇ ಶಾಕ್ ಆಗಿದೆ.

ದಾವಣಗೆರೆಯ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ ಗುರುಸಿದ್ದನಗೌಎ ಅವರ ನಿವಾಸಕ್ಕೆ ಎಸ್ ಎಸ್ ಮಲ್ಲಿಕಾರ್ಜುನ ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಗುರುಸಿದ್ದನಗೌಎ ಪುತ್ರ ಡಾ.ರವಿಕುಮಾರ್ ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿರುವ ಎಸ್ ಎಸ್ ಮಲ್ಲಿಕಾರ್ಜುನ, ದಾವಣಗೆರೆ ಬಿಜೆಪಿಯಲ್ಲಿ ಉಸಿರು ಕಟ್ಟುವ ವಾತಾವರಣವಿದೆ. ಹೀಗಾಗಿ ಕಟ್ಟಾ ಆರ್ ಎಸ್ ಎಸ್ ವ್ಯಕ್ತಿಯಾಗಿದ್ದ ಗುರುಸಿದ್ದನಗೌಡರು ಕಾಂಗ್ರೆಸ್ ಸೇರಿದ್ದಾರೆ. ಗುರುಸಿದ್ದನಗೌಡ್ರು ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಸೇರಿರುವುದರಿಂದ ನಮಗೆ ಆನೆ ಬಲ ಬಂದಂತೆ ಆಗಿದೆ. ಅವರುಗಳ ಮಾರ್ಗದರ್ಶನದಲ್ಲಿ ನಾವೂ ನಡೆಯುತ್ತೇವೆ ಎಂದಿದ್ದಾರೆ.

ಇದೆ ವೇಳೆ ಮಾತನಾಡಿದ ಗುರುಸಿದ್ಧನಗೌಡ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರು ಕೆಜೆಪಿ ಮೂಡಿನಿಂದ ಹೊರಗೆ ಬಂದಿಲ್ಲ. ಸಂಸದ ಸಿದ್ದೇಶ್ವರ ಸರ್ವಾಧಿಕಾರಿ ವರ್ತನೆಯಿಂದ ನನಗೆ ಬೇಸರವಾಗಿದೆ. ಇದೆ ಕಾರಣಕ್ಕೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

11 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

48 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago