Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೈಕ್ಷಣಿಕ ಸಾರ್ಥಕತೆಗಾಗಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದೇವೆ : ಎಂ.ಸಿ.ರಘುಚಂದನ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.20 : ಗುಣಮಟ್ಟದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿದ್ದಾಗ ಮಾತ್ರ ರ್ಯಾಂಕ್ ಪಡೆಯಲು ಸಾಧ್ಯ ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ, ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮಧುರ ಕ್ಷಣಗಳು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಬೀಳ್ಕೊಡುಗೆ ಸಮಾರಂಭ ಉದ್ಗಾಟಿಸಿ ಮಾತನಾಡಿದರು.

ಜ್ಞಾನ ಎನ್ನುವುದು ಪವಿತ್ರ ಶ್ರೇಷ್ಟವಾದುದು. ಪರಮಾತ್ಮನ ಸ್ವರೂಪವಿದ್ದಂತೆ. ಶಿಕ್ಷಕರುಗಳು ವೃತ್ತಿ ಧರ್ಮದ ಪಾವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ಶಿಕ್ಷಕರುಗಳಲ್ಲಿ ತಾಳ್ಮೆಯಿರಬೇಕು. ನಿರ್ಧಿಷ್ಠವಾದ ಗುರಿಯಿಟ್ಟುಕೊಂಡು ಮುಂದಿನ ಹೆಜ್ಜೆಯಿಡಬೇಕು. ಗುಣಮಟ್ಟದ ವಿದ್ಯಾರ್ಥಿಗಳು ಕಡಿಮೆಯಾಗುತ್ತಿರುವುದರಿಂದ ಬಹಳ ದಿನಗಳಿಂದ ನಮ್ಮ ಸಂಸ್ಥೆಗೆ ರ್ಯಾಂಕ್ ಬಂದಿರಲಿಲ್ಲ. ಕಳೆದ ಜುಲೈ/ಆಗಸ್ಟ್‌ನಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ನಡೆದ ಬಿ.ಕಾಂ. ಅಂತಿಮ ಪದವಿ ಪರೀಕ್ಷೆಯಲ್ಲಿ ಕವಿತಾ ಪ್ರಥಮ ರ್ಯಾಂಕ್ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಪಿ.ಯು.ಸಿ.ಯಲ್ಲಿ ರಾಜ್ಯಕ್ಕೆ ಆರನೆ ರ್ಯಾಂಕ್ ಗಳಿಸಿದ್ದರು. ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಗಳಿಸಿದ ಪರಿಣಾಮ ಉಚಿತ ಶಿಕ್ಷಣ ನೀಡಿದ್ದೇವೆ ಎಂದರು.

ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ವಿದ್ಯಾರ್ಥಿಗಳು ಇಲ್ಲಿಗೆ ಬಂದು ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ನಾನಾ ಕಡೆ ಉದ್ಯೋಗದಲ್ಲಿರುವುದು ನಿಜವಾಗಿಯೂ ನಮಗೆ ಖುಷಿ ಕೊಟ್ಟಿದೆ. ಸರ್ಕಾರದ ಗ್ರಾಂಟ್‍ಗಾಗಿ ಹದಿನೆಂಟು ವರ್ಷಗಳ ಕಾಲ ಕಾದು ಕೆಲಸ ಮಾಡಿದ ಸಿಬ್ಬಂದಿಗಳು ನಮ್ಮ ಸಂಸ್ಥೆಯಲ್ಲಿದ್ದಾರೆ. ಕೇವಲ ಹಣ ಗಳಿಕೆಯಷ್ಟೆ ನಮ್ಮ ಸಂಸ್ಥೆಯ ಉದ್ದೇಶವಲ್ಲ. ಶೈಕ್ಷಣಿಕ ಸಾರ್ಥಕತೆಗಾಗಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದೇವೆ. ವಿದ್ಯಾರ್ಥಿಗಳಲ್ಲಿ ಹುಡುಗಾಟ, ಉಡಾಫೆ ಇರಬಾರದು.

ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಜಿ.ಈ.ಭೈರಸಿದ್ದಪ್ಪ, ಆರ್.ಎಸ್.ರಾಜು, ಡಾ.ಬಿ.ಸಿ.ಅನಂತರಾಮು, ಎಂ.ವಿ.ಗೋವಿಂದರಾಜು, ಡಾ.ಕೆ.ಪಿ.ನಾಗಭೂಷಣ, ಡಾ.ಬಿ.ಚಂದ್ರಪ್ಪ, ಡಾ.ಜಿ.ಬಿ.ರಾಜಪ್ಪ, ವಿ.ಪ್ರಕಾಶ್, ಡಾ.ಲಿಂಗರಾಜು, ಆರ್.ಹಂಚಿನಮನೆ, ಬಸವರಾಜ್ ಸಿ. ಎಮ್.ಜಿ.ಪರಶುರಾಮ್, ಜಿ.ಜೆ.ಸೂರಯ್ಯ, ಸ್ವಾಲೇಹ ಬೇಗಂ, ಕು.ಕಲ್ಪನಾ ಎಂ.ಆರ್, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರುಗಳು, ಬೋಧಕ, ಬೋಧಕೇತರ ಸಿಬ್ಬಂದಿಯವರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...