ಸುದ್ದಿಒನ್, ಚಿತ್ರದುರ್ಗ, ಫೆ. 26 : ದಾವಣಗೆರೆಯ ವಿ.ಟಿ.ಯು. ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಪ್ಲಾಟಿನಮ್ ಜುಬಿಲಿ ಸೆಲೆಬ್ರೇಶನ್ ಉತ್ಕರ್ಷ-2026 ಅಂಗವಾಗಿ ನಡೆದ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಿತ್ರದುರ್ಗದ ಎಸ್.ಜೆ.ಎಂ. ಫಾರ್ಮಸಿ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಗಳಿಸಿ 10,000/- ರೂ ನಗದು ಬಹುಮಾನ ಮತ್ತು ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.
ರೋಹಿತ್ ಕುಮಾರ್ (ತಂಡದ ನಾಯಕ), ಮಣಿ ಯಾದವ್, ರಾಹುಲ್ ನಂದನ್, ಅರುಣ್ ಕುಮಾರ್, ಸರೋಜ್ ಮಂಡಲ್, ರಥಿನ್ ಮೈಟಿ, ಅಭಿಜಿತ್ ಸಮಯ್, ಅರಿಂದಮ್ ವಿಶ್ವಾಸ್, ದರ್ಶನ್ ಲಮಾಣಿ, ತರುಣ್ ಕುಮಾರ್, ಶರಣ್ ರಾಥೋಡ್ ಬಿ ಫಾರ್ಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
ಪಂದ್ಯಾವಳಿಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನವನ್ನು ನೀಡಿ ಆಯೋಜಕರ ಪ್ರಶಂಸೆಗೆ ಪಾತ್ರರಾಗಿದ್ದು, ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ್, ಸದಸ್ಯರಾದ ಡಾ ಶ್ರೀ ಬಸವಕುಮಾರ ಸ್ವಾಮೀಜಿ, ಹಾಗೂ ಪ್ರಾಂಶುಪಾಲರಾದ ಡಾ ಟಿ.ಎಸ್. ನಾಗರಾಜ್ ಅವರುಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












