Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್. ಜಾನಕಿ ನಿಧನಕ್ಕೆ ಕಾರಣ ಬಹಿರಂಗ: ಅಪೋಲೋ ಆಸ್ಪತ್ರೆ ನೀಡಿದ ಅಧಿಕೃತ ಮಾಹಿತಿ ಇಲ್ಲಿದೆ

---Advertisement---

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ಹಠಾತ್ ನಿಧನಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಇದೀಗ ಸ್ಪಷ್ಟನೆ ಸಿಕ್ಕಿದೆ. ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ ಅವರ ಆರೋಗ್ಯ ಸ್ಥಿತಿ ಹಾಗೂ ಸಾವಿನ ಕಾರಣದ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.ಆಸ್ಪತ್ರೆಯ ಮಾಹಿತಿ ಪ್ರಕಾರ, ಜುಲೈ 11ರಂದು ಮಧ್ಯಾಹ್ನ 12.49ಕ್ಕೆ ಎಸ್. ಜಾನಕಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತಂದಾಗಲೇ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು, ವೈದ್ಯರು ತಕ್ಷಣ ತಪಾಸಣೆ ನಡೆಸಿ ತೀವ್ರ ನಿಗಾ ಘಟಕಕ್ಕೆ (ICU) ಸ್ಥಳಾಂತರಿಸಿ ಚಿಕಿತ್ಸೆ ಆರಂಭಿಸಿದ್ದರು.

ಮೂಲಗಳ ಪ್ರಕಾರ, ಜಾನಕಿ ಅವರು ಕಾಲಿನ ತೀವ್ರ ನೋವಿನ ಸಮಸ್ಯೆಯಿಂದ ಆಸ್ಪತ್ರೆಗೆ ಬಂದಿದ್ದರು. ಕಾಲಿನ ಗಾಯವು ಗ್ಯಾಂಗ್ರೀನ್ ಆಗಿ ಮಾರ್ಪಟ್ಟಿದ್ದು, ಸೋಂಕು (ಇನ್ಫೆಕ್ಷನ್) ವ್ಯಾಪಕವಾಗಿ ಹರಡಿದ್ದ ಕಾರಣ ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತು.ಅಪೋಲೋ ಬಿಜಿಎಸ್ ಆಸ್ಪತ್ರೆಯ ತಜ್ಞ ವೈದ್ಯರ ಬಹುಶಿಸ್ತೀಯ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದ ವೇಳೆ, ಜಾನಕಿ ಅವರಿಗೆ ಹಠಾತ್ ಹೃದಯ ಸ್ತಂಭನ (Cardiac Arrest) ಸಂಭವಿಸಿತು. ವೈದ್ಯರು ಅವರನ್ನು ಉಳಿಸಲು ಸತತ ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 7.30ಕ್ಕೆ ಅವರು ಕೊನೆಯುಸಿರೆಳೆದರು ಎಂದು ಆಸ್ಪತ್ರೆ ತಿಳಿಸಿದೆ.

ಸಾವಿಗೆ ಕಾರಣ ಏನು?
ಆಸ್ಪತ್ರೆಯ ಅಧಿಕೃತ ಪ್ರಕಟಣೆಯ ಪ್ರಕಾರ, ಕಾಲಿನಲ್ಲಿದ್ದ ತೀವ್ರ ಸೋಂಕು ದೇಹದ ಇತರೆ ಭಾಗಗಳಿಗೂ ಹರಡಿದ್ದರಿಂದ ಆರೋಗ್ಯದಲ್ಲಿ ಗಂಭೀರ ಏರುಪೇರು ಉಂಟಾಯಿತು. ಇದೇ ವೇಳೆ ಸಂಭವಿಸಿದ ಹಠಾತ್ ಹೃದಯ ಸ್ತಂಭನವೇ ಎಸ್. ಜಾನಕಿ ಅವರ ನಿಧನಕ್ಕೆ ಪ್ರಮುಖ ಕಾರಣವಾಗಿದೆ ಎಂದು ವೈದ್ಯಕೀಯ ಮಂಡಳಿ ಸ್ಪಷ್ಟಪಡಿಸಿದೆ.ಗಾನಕೋಗಿಲೆಯ ಅಗಲಿಕೆಯಿಂದ ಭಾರತೀಯ ಸಂಗೀತ ಲೋಕವು ತನ್ನ ಅಪರೂಪದ ಧ್ವನಿಯೊಂದನ್ನು ಕಳೆದುಕೊಂಡಿದ್ದು, ಅವರ ಅಮರ ಗೀತೆಗಳು ಸಂಗೀತಾಸಕ್ತರ ಹೃದಯದಲ್ಲಿ ಎಂದೆಂದಿಗೂ ಜೀವಂತವಾಗಿರಲಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now