Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: ಮಧ್ಯಾಹ್ನದವರೆಗೆ ಎಲ್ಲೆಲ್ಲಾ ಇರಲಿದೆ ಅಂತಿಮ ದರ್ಶನದ ವ್ಯವಸ್ಥೆ..?

---Advertisement---

ನಾಡು ಕಂಡ ಅಪ್ರತಿಮ ನಾಯಕ.. ರಾಜಕೀಯ ಮುತ್ಸದ್ದಿ ನಮ್ಮೆಲ್ಲರನ್ನು ಅಗಲಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಹುಟ್ಟೂರಾದ ಮಂಡ್ಯದ ಸೋಮಹಳ್ಳಿಯಲ್ಲಿ ಇಂದು ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಎಸ್.ಎಂ. ಕೃಷ್ಣ ಅವರಿಗೆ ಗೌರವ ನೀಡುವ ಸಲುವಾಗಿ ಸರ್ಕಾರಿ ರಜೆ ಎಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮೌನಾಚರಣೆ ಇದೆ. ಇಂದು ಅಂತ್ಯಸಂಸ್ಕಾರಕ್ಕೂ ಮುನ್ನ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ.

ಮಂಡ್ಯದ ಹುಟ್ಟೂರಿಗೆ ತೆಗೆದುಕೊಂಡು ಹೋಗುವ ಮುನ್ನ ಕೆಲವೊಂದು ಕಡೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದವರೆಗೂ ಅಂತಿಮ ದರ್ಶನದ ವ್ಯವಸ್ಥೆ ಮಾಡಿ, ಬಳಿಕ ಅಂತ್ಯಸಂಸ್ಕಾರ ನೆರವೇರಿಸಲಿದ್ದಾರೆ. ಸೋಮಹಳ್ಳಿಯಲ್ಲಿ ಎಸ್.ಎಂ.ಕೃಷ್ಣ ಅವರ ನೆಚ್ಚಿನ ಕಾಫಿ ಡೇ ಆವರಣದಲ್ಲಿಯೇ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮುಂದೆ ನಿಂತು ಎಲ್ಲಾ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ತೆರೆದ ವಾಹನದ ಮೂಲಕ ಬೆಂಗಳೂರಿನ ಸದಾಶಿವನಗರದ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಮೆರವಣಿಗೆ ಮೂಲಕ ಮದ್ದೂರಿಗೆ ಹೊರಡಲಿದೆ. ಈ ಮೆರವಣಿಗೆ ಅಲ್ಲಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಿದೆ. ಕೆಂಗೇರಿ, ಬಿಡದಿ, ರಾಮನಗರ ಐಜೂರು ಸರ್ಕಲ್, ಚನ್ನಪಟ್ಟಣದ ಗಾಂಧಿ ಭವನ ಸರ್ಕಲ್ ನಲ್ಲಿ ಅಂತಿಮ ದರ್ಶನ ನೀಡಿ, ಮದ್ದೂರಿನ ಸೋಮಹಳ್ಳಿಗೆ ತಲುಪಲಿದೆ. ಮಧ್ಯಾಹ್ನದವರೆಗೂ ಸೋಮಹಳ್ಳಿಯಲ್ಲಿಯೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯ ಸಂಸ್ಕಾರ ನಡೆಯಲಿದ್ದು, ವೈದಿಕ ಪುರೋಹಿತರಾದ ಬಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ವಿಧಿವಿಧಾನದ ಮೂಲಕ ಅಂತ್ಯ ಸಂಸ್ಕಾರ ನೆರವೇರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...