Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿನ್ನೆ ತನಕ ಸ್ಪರ್ಧೆ ಮಾಡಲ್ಲ ಎಂದಿದ್ದ ಸದಾನಂದಗೌಡ ಈಗ ಯೂಟರ್ನ್

---Advertisement---

ಬೆಂಗಳೂರು: ಕಳೆದ ಕೆಲ ದಿನಗಳಿಂದಾನೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿರುವ ಬಗ್ಗೆಯೇ ಮಾತನಾಡುತ್ತಿದ್ದರು. ಟಿಕೆಟ್ ಆಕಾಂಕ್ಷಿಯಲ್ಲ, ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದೇ ಹೇಳಿದ್ದರು. ಆದರೆ ಈಗ ಆ ಹೇಳಿಕೆಗೆ ಉಲ್ಟಾ ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿ ವಿ ಸದಾನಂದ ಗೌಡ ಅವರು, ಉತ್ತರ ಕ್ಷೇತ್ರದಿಂದ ಮತ್ತೆ ಸ್ಪರ್ಧೆಗೆ ಒತ್ತಡ ಹೆಚ್ಚಾಗಿದೆ. ನಿನ್ನೆ ನಮ್ಮ ಹಿರಿಯ ನಾಯಕರು ಮನೆಗೆ ಬಂದು ಸ್ಪರ್ಧೆ ಮಾಡುವಂತೆ ಮನವಿ ಮಾಡಿದರು. ಎಲ್ಲಾ ಶಾಸಕರು, ಮಾಜಿ ಮಂತ್ರಿಗಳು, ಕಾರ್ಯಕರ್ತರು ಕೂಡ ಹೇಳುತ್ತಿದ್ದಾರೆ. ಎಸ್ ಟಿ ಸೋಮಶೇಖರ್, ಮುನಿರಾಜು, ಭೈರತಿ ಬಸವರಾಜು ಕೂಡ ಈ ಬಾರಿ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ ಎಂದಿದ್ದಾರೆ.

ಅವರೆಲ್ಲರೂ ನನ್ನ ಮೇಲೆ ಪ್ರೀತಿ ಇಟ್ಟುಕೊಂಡಿದ್ದಾರೆ. ಬೆಂಗಳೂರು ಉತ್ತರದಲ್ಲಿ ಎಂಟು ಕ್ಷೇತ್ರದಲ್ಲೂ ನನ್ನ ಶತ್ರುಗಳಿಲ್ಲ. ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂಬುದೇ ನನ್ನ ಆಸೆ. ಆದರೆ ನೀವೇ ಸ್ಪರ್ಧೆ ಮಾಡಿ ಎಂದು ಹಿಂಸೆ ಮಾಡುತ್ತಿದ್ದಾರೆ. ಮತ್ತೆ ಸ್ಪರ್ಧೆ ಮಾಡುವ ಬಗ್ಗೆ ಮನಸ್ಸು ಬದಲಿಸಿಕೊಳ್ಳುವ ಬಗ್ಗೆ ಯೋಚನೆ ಮಾಡೋಣಾ ಎಂದೇ ಹೇಳಿದ್ದಾರೆ. ಈ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸದಾನಂದ ಗೌಡ ಅವರು ಸ್ಪರ್ಧೆ ಮಾಡುವ ಸೂಚನೆಯನ್ನು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...