Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 01 ರಂದು ಸದ್ಗುರು ಶ್ರೀ ಜಗ್ಗಿ ವಾಸುದೇವ್ ಚಿತ್ರದುರ್ಗಕ್ಕೆ ಆಗಮನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 28 : ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್ ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ 01 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದಾರೆ,

ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಬೇಟಿ ನೀಡಿ ಪೀಠಾಧ್ಯಕ್ಷರಾದ
ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳೊಂದಿಗೆ 30 ನಿಮಿಷಗಳ ಕಾಲ ಸೌಹಾರ್ದ ಚರ್ಚೆ ನಡೆಸಲಿದ್ದಾರೆ.

ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯುವ “ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನ” ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ವೇದಿಕೆಯಲ್ಲಿ ಚಿತ್ರದುರ್ಗ ಕಬೀರಾನಂದ ಆಶ್ರಮದ ಶ್ರೀಶಿವಲಿಂಗಾನಂದ ಮಹಾ ಸ್ವಾಮೀಜಿಗಳು ಉಪಸ್ಥಿತರಿರುವರು, ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿದ್ಯ ವಹಿಸುವರು. ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು ಸದ್ಭಕ್ತರು, ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕೆಂದು ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಟ್ರಸ್ಟಿ ರವಿ ಮಲ್ಲಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)