Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ಯಾರಂಟಿ ಯೋಜನೆಗಾಗಿ ಎಸ್ಪಿಯ ಸಂಬಳ ನಿಲ್ಲಿಸಿಲ್ಲ : ಸಚಿವ ಪರಮೇಶ್ವರ್ ಸ್ಪಷ್ಟನೆ

Facebook
Twitter
Telegram
WhatsApp

 

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿನ್ನೆಯಷ್ಟೇ ನೌಕರರ ವುಚಾರವಾಗಿ ಟ್ವೀಟ್ ಮಾಡಿದ್ದರು. ನೌಕರರಿಗೆ ಸಕಾಲಕ್ಕೆ ಸಿಗದ ವೇತನ!. ಇಲ್ಲಿ ಎಲ್ಲಾ ಹಾಳುಮಾಡಿ ದೆಹಲಿಯಲ್ಲಿ ಭಾಷಣ ಹೊಡೆಯಲು ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಸರ್ಕಾರೀ ನೌಕರರಿಗೆ ಸರಿಯಾದ್ ಸಮಯದಲ್ಲಿ ವೇತನ ನೀಡಲು ಸರ್ಕಾರದಲ್ಲಿ ಅನುದಾನದ ಕೊರತೆ ಇದೆ!. ರಾಜ್ಯದ ಆರ್ಥಿಕ ಪರಿಸ್ಥಿತಿ ಇಷ್ಟು ಸಂಕಷ್ಟಕ್ಕೆ ತಲುಪಲು ನೇರ ಸಿದ್ದರಾಮಯ್ಯನವರ ಪಟಾಲಂ ಕಾರಣ. ಈಗ ಮಹದೇವಪ್ಪನಿಗೂ ಟೋಪಿ , ಕಾಕಪಾಟಿಲನಿಗೂ ಟೋಪಿ ಎಂದು ಟ್ವೀಟ್ ಮಾಡಿದ್ದರು.

ಈ ವಿಚಾರಕ್ಕೆ‌ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಬೇರೆ ಬೇರೆ ಕಾರಣದಿಂದ ಸಂಬಳ ನಿಲ್ಲಿಸಲಾಗುತ್ತದೆ. ಯಾವುದೋ ಕಾರಣಕ್ಕೆ ಎಸ್ಪಿಯ ಸಂಬಳ ನಿಲ್ಲಿಸಿರಬಹುದು. ಗ್ಯಾರಂಟಿ ಯೋಜನೆಗಳಿಗೆ ಸಂಬಳ ನಿಲ್ಲಿಸಿಲ್ಲ. ಯೋಜನೆಗೆ ಬೇಕಾದ ಹಣವನ್ನು ಬಜೆಟ್ ನಲ್ಲಿ ಇಟ್ಟಿದ್ದಾರೆ.

ಸಂಬಳ ನಿಲ್ಲಿಸಿ ಗ್ಯಾರಂಟಿ ನೀಡುವ ಅಗತ್ಯವಿಲ್ಲ. ಯತ್ನಾಳ್ ಕಾಮಾಲೆ ಕಣ್ಣಿನಿಂದ‌ನೋಡ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ತಡೆ ಕುರಿತು ಕೆಲವು ಕಾರಣಗಳಿಂದ ರಿಪೊರ್ಟ್ ಮಾಡಿಕೊಂಡಿರಲಿಲ್ಲ. ಸ್ಥಳೀಯ ಶಾಸಕರು ನಾಯಕರಿಂದಲೂ ಕೆಲವು ಆಕ್ಷೇಪ ಬಂದಿತ್ತು. ಈ ಹಿನ್ನಲೆ ತಡೆ ಹಿಡಿಯಲಾಗಿದೆ. ಸರಿಪಡಿಸುತ್ತೇವೆ, ಎಚ್ಚರಿಕೆಯಿಂದ ವರ್ಗಾವಣೆ ಮಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!