Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಮೂಲ್ ಉತ್ಪನ್ನಗಳ ಮಾರಾಟ : ಕರ್ನಾಟಕ ರಾಜ್ಯ ರೈತ ಸಂಘ ಖಂಡನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಗುಜರಾತ್ ಮೂಲದ ಅಮೂಲ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಮಾತನಾಡಿ ಗುಜರಾತ್ ಸರ್ಕಾರದ ಅಮೂಲ್ ಹಾಲು ಮತ್ತು ಉತ್ಪನ್ನಗಳನ್ನು ರಾಜ್ಯಕ್ಕೆ ತಂದು ಮಾರುಕಟ್ಟೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ನಮ್ಮ ರಾಜ್ಯದ ರೈತರ ಬದುಕನ್ನು ಸರ್ವನಾಶ ಮಾಡಲು ಹೊರಟಿದೆ.

ಕೃಷಿ ಜೊತೆ ಹೈನುಗಾರಿಕೆಯನ್ನು ನಂಬಿಕೊಂಡಿರುವ ರೈತರ ಬದುಕು ದಿವಾಳಿಯಾಗುವುದಲ್ಲದೆ ನಂದಿನಿ ಹಾಲನ್ನು ಸಂಪೂರ್ಣವಾಗಿ ಅಮೂಲ್ ಹಾಲನ್ನಾಗಿ ಮಾರ್ಪಡಿಸುವ ಕುತಂತ್ರ ಇದಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ ಗುಜರಾತ್ ಮಾದರಿ ಸಹಕಾರ ಸಂಘವನ್ನು ರಾಜ್ಯದಲ್ಲಿ ಅಸ್ತಿತ್ವಕ್ಕೆ ತಂದು ನಂದಿನ ಹಾಲಿನ ಮಾರುಕಟ್ಟೆಯನ್ನು ಬಂದ್ ಮಾಡಿ ಅಮೂಲ್ ಹಾಲು ಮತ್ತು ಉತ್ಪನ್ನಗಳನ್ನು ಮಾರಾಟ ಮಾಡುವ ಸಿದ್ದತೆ ನಡೆಯುತ್ತಿದ್ದು, ಹೈನುಗಾರಿಕೆಯನ್ನು ನೆಚ್ಚಿಕೊಂಡಿರುವ 25 ಲಕ್ಷ ಕುಟುಂಬಗಳು ಹಾಗೂ ಅವರ ಅಲವಂಭಿತರು ಒಟ್ಟು 75 ಲಕ್ಷ ಮಂದಿ ರಾಜ್ಯದಲ್ಲಿ ಬೀದಿಗೆ ಬೀಳುವ ಅಪಾಯಕಾರಿ ಪರಿಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರ ರಾಜ್ಯದಲ್ಲಿ ಅಮೂಲ್ ಹಾಲು ತಂದು ಮಾರಾಟ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅದಕ್ಕಾಗಿ ರಾಜ್ಯದಲ್ಲಿರುವ ರೈತರನ್ನು ಎಚ್ಚರಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ಉಪಾಧ್ಯಕ್ಷ ರುದ್ರಸ್ವಾಮಿ, ತಾಲ್ಲೂಕು ಅಧ್ಯಕ್ಷ ಧನಂಜಯ, ಬಿ.ಓ.ಶಿವಕುಮಾರ್, ಮೇಟಿಕುರ್ಕೆ ತಿಪ್ಪೇಸ್ವಾಮಿ, ಚೇತನ್‍ಕುಮಾರ್, ಎಂ.ಎಸ್.ಪ್ರಭು, ಎ.ತಿಪ್ಪೇಸ್ವಾಮಿ, ಓಂಕಾರಪ್ಪ, ಕೆ.ಎಂ.ಕಾಂತರಾಜು, ಎಸ್.ತಿಪ್ಪೇಸ್ವಾಮಿ, ಎಸ್.ರೇವಣ್ಣ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment